ವಿಷಯಕ್ಕೆ ಹೋಗಿ

ಏಕಾಂಗಿಯೊಬ್ಬನ ದಾರಿಯ ಕವಲುಗಳು...

ಇಷ್ಟೂ ದೂರ ಸಾಗಿ ಬಂದರೂ ನಾನು ಇನ್ನು ಗುರಿ ಮುಟ್ಟೆ ಇಲ್ಲ ಎಂಬ ಕಠೋರ ಸತ್ಯ ಅರಿವಿಗೆ ಬರುವದು ಒಮ್ಮೆ ಕತ್ತು ತಿರುಗಿಸಿ ಹಿಂದೆ ನೋಡಿದಾಗ. ನಾವು ಅಂದುಕೊಂಡ ಕನಸು, ನಾವು ಕಟ್ಟಿಕೊಂಡ ಗುರಿಯನ್ನು ತಲುಪುವ ಹಾದಿಯಲ್ಲಿ ನೂರೆಂಟು ಕವಲುಗಳು, ತಗ್ಗುದಿನ್ನೆಗಳು ಹೆಡೆ ಬಿಚ್ಚಿ ಸ್ವಾಗತಿಸುತ್ತವೆ.
ನಮ್ಮ ಮನಸಿನ ನಿರ್ಧಾರವನ್ನು ಕೇಳದೆ ಬೇರೆ ಯಾರದೋ ಮಾತಿಗೆ ನಮ್ಮ ಕನಸನ್ನು ಚಿವುಟಿ ಮತ್ತೊಬ್ಬರ ಕನಸಿಗೆ ಜೀತದಾಳಾಗಿ ದುಡಿಯುವ ಪರಿ ದಿಕ್ಕು ದೆಸೆಯಿಲ್ಲದೆ ಸುತ್ತುವ ದಿಕ್ಸೂಚಿಯಿಲ್ಲದ ಹಡಗಿನಂತಾಗುತ್ತದೆ.
ನಾನು ಹೊಗುವ ದಾರಿ ನನಗೆ ಮಾತ್ರ ಸ್ಪಷ್ಟವಾಗಿ ಕಾಣುತ್ತದೆ ಹೊರತು ಬೇರೆ ಯಾರಿಗೂ ಅಲ್ಲ. ಅದು ಎಂದಿಗೂ ಕವಲೊಡೆದು ಅಪರಿಚಿತ ಊರಿಗೆ ಹೋಗುವದಿಲ್ಲ. ಅಂದುಕೊಂಡ ಗೂಡಿಗೆ ನಮ್ಮನ್ನು ಕರೆದೊಯ್ಯುತ್ತದೆ. ಅಲ್ಲಿ ನಮಗಾಗಿ ಸುಖ ಸಂತೋಷದ ನಿಧಿ ಕಾದು ಕೂತಿರುತ್ತದೆ.
ನಾನು ಸಾಗುವ ಹಾದಿಯಲ್ಲಿ ಮುಳ್ಳಿದೆ ಅಂತ ಗೊತ್ತಿದ್ದರೂ ಅದು ನನಗೆ ಅಚ್ಚುಮೆಚ್ಚಿನ ಹಾದಿಯಾಗಿರುತ್ತದೆ. ಅಲ್ಲಿ ನನಗಾಗಿ ಹೂವು ಹಾಸಿಗೆ ಹಾಸಿರುತ್ತದೆ. ತಂಪು ತಂಗಾಳಿಯ ಜೊತೆ ನೆರಳು ನೀಡುತ್ತದೆ. ಅದಕ್ಕೆ ನಾನು ಮಾಡಬೇಕಾದದ್ದು ಇಷ್ಟೇ, ನನಗಾಗಿ ನಾನು ಬದುಕುವದು. ಇದು ಒಂತರಾ ಸ್ವಾರ್ಥ ಎನಿಸಿದರೂ ಪರರಿಗೋಸ್ಕರ ದಿನಗಟ್ಟಲೆ ವ್ಯಯಿಸುವ ನಾನು ನನಗೋಸ್ಕರ ಒಂದಷ್ಟು ಸಮಯ ಕೊಡುವದರಲ್ಲಿ ಏನು ತಪ್ಪಿದೆ..?
ಅದೇ ಸಂತೆಯ ಪರಿಚಿತವಿರುವ ಮಂದಿಯ ನಡುವೆ ನಮ್ಮ ದಾರಿ ಸಿಕ್ಕು ದಿಕ್ಕಾಪಾಲಾಗಿ ದಡ ಕಾಣದ ಹಡಗಿನಂತಾಗುತ್ತದೆ ಬಾಳು. ತಮ್ಮ ಜೀವನವೇ ಗಟ್ಟಿಮಾಡಿಕೊಳ್ಳಲಾರದೇ ಪರಿತಪಿಸುವವು ನಮಗೆ ಪುಗ್ಸಟ್ಟೆ ಐಡಿಯಾ ಕೊಡುತ್ತಾ ನಮ್ಮ ಬಾಳನ್ನು ಕತ್ತಲಲ್ಲಿ ನೂಕಲು ನಿಂತಿರುತ್ತಾರೆ.
ಅಪ್ಪಅವ್ವ ಕಂಡ ಕನಸುಗಳನ್ನು ನನಸು ಮಾಡುವನು ನಾನೇ ಅಲ್ಲವೇ? ನನಗೆ ನನದೇ ಆದ ಗುರಿಯಿದೆ, ದಾರಿವಿದೆ, ಬಣ್ಣಬಣ್ಣದ ಕನಸುಗಳಿವೆ. ಅದು ಇತರರಿಗೆ ಯಾಕೆ ಅರ್ಥವಾಗುತ್ತಿಲ್ಲ?
ಇವರ ಜಾತ್ರೆಯ ನಡುವೆ ಪಾರಾಗಿ ಒಂಟಿಯಾಗಬೇಕು. ಒಂಟಿತನದಲ್ಲಿ ಏನೋ ಒಂಥರಾ ಸುಖವಿದೆ. ಒಂಟಿತನದಲ್ಲಿ ಹರಿಸಿದ ಕಣ್ಣಿರು ಭವಿಷ್ಯದಲ್ಲಿ ಮುತ್ತಿನ ಹನಿಗಳಾಗಿ ಮಾರ್ಪಾಡಾಗುತ್ತವೆ ಎಂದು ಎಲ್ಲೋ ಓದಿದ ನೆನಪು. ನಾನು ಅಳುವಾಗ ಮತ್ತೋಬ್ಬರ ಸಮಾಧಾನ ಅಲ್ಪ ಮಟ್ಟಿಗೆ ಸಮಾಧಾನ ನೀಡುತ್ತದೆ. ಅದೇ ಏಕಾಂಗಿಯಾಗಿ ಟೈವಾಕ್ ಗುಡ್ಡದ ಕೆಂಪುದಾರಿಯ ಮೇಲೆ ಕಣ್ಣೀರ ಹನಿಗಳನ್ನು ಸುರಿಸುತ್ತಾ, ದೂರದಲ್ಲಿ ಮಿನುಗುವ ನಕ್ಷತ್ರಗಳನ್ನು ನೋಡುತ್ತಾ ಸಾಗುವಾಗ ಏನೋ ಖುಷಿಯಾಗುತ್ತದೆ. ನನಗೆ ಎಲ್ಲಾ ಸಂಬಂಧಗಳು ಚಿಂದಿಯಾಗಿ ಹರಿದು ಹೋದರು ನಿಸ್ವಾರ್ಥಿ ಹಾಲುಗಲ್ಲದ ಚಂದಿರ ನನ್ನ ಜೋತೆ ಇರುತ್ತಾನೆ. ಅಷ್ಟು ಸಾಕಲ್ಲವೇ ನನಗೆ ನನ್ನ ನೋವನ್ನು ಅರ್ಥಮಾಡಿಕೊಂಡು ಹಿತವಾದ ತಂಗಾಳಿ ಬೀಸುತ್ತಾ ನಾ ನಡಯುವ ದಾರಿಯಲ್ಲಿ ಮಂದ ಬೆಳಕು ಚಲ್ಲಲ್ಲು.
ಏಕಾಂಗಿಯಾಗಿ ಸಾಗುವಾಗ ಸುಡುವ ಬಿಸಿಲು ಸಹ ಇಷ್ಟವಾಗುತ್ತದೆ. ರೂಮಿನ ಗೋಡೆಗಳು ಸಹ ಆಪ್ತವೆನಿಸುತ್ತವೆ. ಜೋರಾಗಿ ಅಳುವಾಗ ರಮಿಸದೆ ನನ್ನ ಪಾಡಿಗೆ ಬಿಟ್ಟು ನನಗೆ ಉಪದೇಶ ಮಾಡುವದಿಲ್ಲ. ಗೋಡೆಗಳ ಮೇಲೆ ನಾನೇ ಗೀಚಿದ ಸಾಲುಗಳು ಕೂಡಾ ಕೆಲವೊಮ್ಮೆ ಉಪದೇಶ ನೀಡುವಂತೆ ಭಾಸವಾದಾಗ ಅಳಿಸಿ ಬಿಡುತ್ತೇನೆ. ನನಗೆ ಯಾರೂ ಮಾತನಾಡಿಸಬಾರದು ಯಾವ ಸಂಭಂಧಗಳು ಇರಬಾರದು ಒಬ್ಬನೇ ಅಡ್ಡಾಟಬೇಕು ಗೋತ್ತು ಗುರಿಯಿಲ್ಲದೇ ಅನ್ನುವ ಸತ್ಯವು ಮನದಲ್ಲಿ ಗಟ್ಟಿಯಾಗಿ ಮೂಡುವಷ್ಟರಲ್ಲಿ ಮನೆಯಿಂದ ಕರೆ ಬಂದು ಮತ್ತೆ ಅದೇ ಗಜಿಬಿಜಿ ಸಂತೆಯೊಳಗೆ ನಾನು ಒಬ್ಬ ಅನ್ನೋ ಹರಿತವಾದ ಸತ್ಯ ಎದೆಯಲ್ಲಿ ಬರ್ಬರವಾಗಿ ಗಾಯಮಾಡಿದ ಅನುಭವವಾಗುತ್ತದೆ.
ಲೇಖನ :ಸಂಗಮೇಶ ಡಿಗ್ಗಿ
8553550012

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಮಾನವ ಘನತೆಯ ಪ್ರತಿಪಾದಕ: ಬಿಜವಾಡ ವಿಲ್ಸನ್

 ಮಲಹೊರುವ ಪದ್ದತಿ ತನ್ನ ಕುಲ ಕಸುಬು ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಮುಂದಾಗಿದ್ದ ಯುವಕನೋರ್ವ ತನ್ನ ದೃಡ ನಿರ್ಧಾರದಿಂದ ದೇಶಾದ್ಯಂತ ಮಲ ಹೊರುವ ಅಮಾನವೀಯ ಪದ್ಧತಿ ವಿರುದ್ಧ ಜನಾಂದೋಲನ ರೂಪಿಸಿ ಮಾನವ ಘನತೆಯ ಬದುಕು (ಡಿಗ್ನಿಟಿ ಆಪ್ ಲೈಪ್)ನ್ನು ತನ್ನ ಹೋರಾಟದ ಮೂಲಕ ಎತ್ತಿ ಹಿಡಿದ ಉದ್ದೇಶಕ್ಕಾಗಿ 2016ನೇ ಸಾಲಿನ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ ಲಭಿಸಿದೆ. ಅವರ ಹೆಸರು ಕೋಲಾರ ಜಿಲ್ಲೆಯ ಕೆಜಿಎಪ್ ಮೂಲದ ಬಿಜವಾಡ ವಿಲ್ಸನ್. ಆಂದ್ರದ ಓಂಗೋಲ್ ಜಿಲ್ಲೆಯ ಕಂಬಾಲದೇನು ಗ್ರಾಮದ ಬಿಜವಾಡ ಜಾಕೋಬ್ ಎಂಬುವವರು 1935ರ ಸಂದರ್ಭದಲ್ಲಿ ಕೆಜಿಎಪ್‌ಗೆ ಆಗಮಿಸಿ ಇಲ್ಲಿನ ಬಿಜಿಎಂಎಲ್ ಕಾರ್ಖಾನೆಯಲ್ಲಿ ಪೌರಕಾರ್ಮಿಕರಾಗಿ ಕೆಲಸಕ್ಕೆ ಸೇರಿಕೊಳ್ಳುತ್ತಾರೆ. 1966ರಲ್ಲಿ ವಿಲ್ಸನ್ ಜನಿಸಿದರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ನೆರೆಯ ಕುಪ್ಪಂನಲ್ಲಿ ನೆರವೇರಿಸಿದ ವಿಲ್ಸನ್ ಕೆಜಿಎಪ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ತದಂತರ ಹೈದರಾಬಾದ್ ವಿವಿಯಲ್ಲಿ ರಾಜಕೀಯ ಶಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಲಹೊರುವ ಕುಲ ಕಸುಬು ತನ್ನ ಕೊನೆಯ ಮಗನಿಗೆ ತಟ್ಟದಿರಲಿ ಎಂಬ ಕಾರಣಕ್ಕೆ ವಿಲ್ಸನ್ ಅವರನ್ನು ಕುಪ್ಪಂನ ವಿದ್ಯಾರ್ಥಿ ನಿಲಯದಲ್ಲಿ ಸೇರಿಸಿ ಶಿಕ್ಷಣ ಕೊಡಿಸಿದ್ದೇ ಪಾಲಕರ ಮಹತ್ಸಾಧನೆಯಾಗಿತ್ತು. ಮಲ ಹೊರುವ ಸಮುದಾಯದವ ಎಂಬ ಕಾರಣಕ್ಕೆ ಸಹ ಪಾಠಿಗಳಿಂದ ಅವಮಾನಕೊಳಗಾಗಿದ್ದ ವಿಲ್ಸನ್ ಇದಕ್ಕೆ ಕಾರಣ ಹುಡುಕಲು ಹೊರಟಾಗ ಪಾಲಕರು ಸತ್ಯ ಮರೆಮ...

ಮೊಸರು ಮಾರುವ ಹುಡುಗನ ಸೈಕಲ್ ಮತ್ತು ಪ್ಲಾಶ್‍ಬ್ಯಾಕ್ ನೆನಪು

‘ಕಾಲನ ಕೈಗೆ ದೇವರು ಸೃಷ್ಟಿ ಮಾಡಿದ ಜಗತ್ತು ಉಳಿಯುವದಿಲ್ಲವೆಂದ ಮೇಲೆ ನಾವು ಯಾವ ಲೆಕ್ಕ’ ಏಲ್ಲೋ ಓದಿದ ಅಣಿಮುತ್ತು ಮೊನ್ನೆ ದುತ್ತನೆ ಮೆದುಳಿನಲ್ಲಿ ಗುಂಗಿ ಹುಳದಂತೆ ಕಾಡತೊಡಗಿತು. ಕಾರಣವಿಷ್ಟೇ, ಎಮ್.ಎ ಮುಗಿಯುವ ಸಮಯವೂ ಹೌದು, ಅದಕ್ಕಿಂತ ಮುಖ್ಯವಾಗಿ “ಆನಂದಮಾರ್ಗ ಆಶ್ರಮ” ತೊರೆಯಬೇಕಲ್ಲ ಎನ್ನುವ ನೋವು. ಆ ನೋವಿಗೆ ಕಾರಣವಾದವನು ದಿನಾಲೂ ಗಟ್ಟಿ ಕೆನೆ ‘ಮೊಸರು ಮಾರುವ ಹುಡುಗ’ ಮತ್ತು ಆತನ ‘ಸೈಕಲ್’. ಆ ಹುಡುಗ 7ನೇ ತರಗತಿ. ಯಲ್ಲಪ್ಪ ಮನ್ಸೂರ. ಸುಮಾರು 3 ಕಿ.ಮಿ ಸೈಕಲ್ ತುಳಿದು ಮೊಸರು ಮಾರುವ ಕಾಯಕ ಮಾಡುತ್ತಾನೆ. ಅದಕ್ಕಿಂತ ಹೆಚ್ಚಾಗಿ ಮುಂಜಾನೆಯ ಎಳೆ ಬಿಸಿಲಿನಲ್ಲಿ ಮಲಗಿದ್ದ ಹಾಸಿಗೆ ಹೊದ್ದು ಮಲಗಿದ್ದ ನನಗೆ ಎಚ್ಚರಿಸುವ ಅಲರಾಂ ಬೆಲ್ ಎಂತಲೇ ಹೇಳಬಹುದು. ಅವನ ಸೈಕಲ್ ಮಾಯಲೋಕದ ಕಿನ್ನರರು ತಮ್ಮ ವಾಹನಗಳಿಗೆ ಶೃಂಗಾರ ಮಾಡಿದಂತೆ ಗಾಲಿಗಳಿಗೆ ರಿಬ್ಬನ್ ಸುತ್ತಿ, ಯುದ್ಧಕ್ಕೆ ಸಿದ್ಧನಾಗಿದ್ದೆನೆ ಎನ್ನುವ ರೀತಿ ಭಾವುಟ ತೋರಿಸಿ, ಗೆಂಡೆಗಳನ್ನು ಗಾಳಿಗೆ ಹಾರಾಡಿಸುತ್ತಾ ಗಂಟೆ ಬಾರಿಸುವ ಗತ್ತು ನನ್ನನ್ನು ಬಾಲ್ಯದ ಪ್ಲಾಶ್‍ಬ್ಯಾಕ್‍ಗೆ ಕರೆದೊಯ್ಯುವಂತೆ ಮಾಡಿತ್ತು. ತೂತು ಬಿದ್ದು ಪುಕ್ಸಟ್ಟೆ ಅಂಡು ಕಾಣಿಸುವ ದೊಗಳೆ ಚಡ್ಡಿ ಹಾಕಿಕೊಳ್ಳುತ್ತಿದ್ದ ವಯಸ್ಸಿನ ಹುಡುಗ ನಾನಾಗಿದ್ದೆ. ‘ಮೊದ ಮೊದಲು ಕೊಂಡ ಹೀರೋ ಸೈಕಲ್’ ಎಂಬತೆ ಪುಟ್ಟ ಸೈಕಲ್ ನಮ್ಮ ಮನೆಯ ಅಂಗಳವನ್ನು ಅಲಂಕರಿಸಿತ್ತು. ಇಡೀ ಊರಿಗೆ ಮೊದಲ ಸೈಕಲ್. ಊರಿನ ಜನ ಬಂದು ಅದನ್ನು ಮೈಸೂರ...

ಚಂದಿರನಲ್ಲದೇ ನಿನಗೇನು ಕೊಡಲಿ ನಾನು..!

ಅವಳು, ಆಕೆ ಬಳಕಿದರೆ ಬಾತುಕೋಳಿಯ ಮೈಯವಳು, ದುಂಡುಮುಖ, ಗಿಣಿಯನ್ನು ನಾಚಿಸುವ ಮೂಗು, ಗಾಳಿ ಬೆಳಕನ್ನುಂಡು ಉಬ್ಬಿಕೊಂಡ ಗಲ್ಲಗಳು, ಅರಳಿ ನಿಶ್ಚಲವಾಗಿ ಕಾಡಿಸುವ ಮುಗ್ಧ ಕಣ್ಣುಗಳು, ಅಲ್ಲಲಿ ಇಳಿಬಿದ್ದಿರುವ ಮುಂಗುರುಳಿನವಳು, ಹೃದಯಕ್ಕೆ ಬೆಂಕಿ ಹಚ್ಚಿ ಮಾಯವಾಗುವ ಪ್ರೇಮಲೋಕದ ರಾಜಕುಮಾರಿಯಂತವಳು, ಬರಗಾಲ ಬಿದ್ದ ನೆಲಕ್ಕೆ ತಂಪೆರೆಯುವ ಮಳೆ ಸುರಿದವಳು, ಮಿನಾಕ್ಷೀ ಚೌಕ್‍ನ ಪ್ರತಿಯೊಂದು ಕಲ್ಲುಕಲ್ಲಿನಲ್ಲಿಯೂ ಕಾಣಿಸಿದವಳು, ಕಾಡಿಸಿದವಳು, ಹೃದಯಕ್ಕೆ ತೂತು ಕೊರೆದವಳು, ಕ್ಲಾಸ್‍ಲ್ಲಿ ಜುಮುಕಿಗಳನ್ನು ಅಲುಗಾಡಿಸುತ್ತಾ, ಕಾಲ್ಗೆಜ್ಜೆಯ ಸದ್ದುಮಾಡುತ್ತಾ ನಡೆದಾಡುವ ನವಿಲಿನಂತವಳು, ಅದಕ್ಕೂ ಮೀರಿ ಧಿಮಾಕಿನ ರಾಣಿಯ ವಂಶದವಳು. ಅವಳಿಗೆ ನಾನು ಪ್ರೀತಿಯಿಂದ ಆಂಬ್ಯುಲೆನ್ಸ್ ಎಂದು ಕರೆಯುತ್ತಿದ್ದೆ. ಅದಕ್ಕೂ ಒಂದು ಕಾರಣವಿದೆ. ಕೋಚಿಂಗ್‍ಗೆ ಬಿಜಾಪೂರಕ್ಕೆ ಬಂದಾಗ ಗೋಲಬುಂಬಜ್‍ದ ಹಾಗೆ ನನ್ನನ್ನು ಸೆಳೆದವಳು ಅವಳು. ನನ್ನ ಹೃದಯದ ಪ್ರತಿ ಕೋಣೆಯಲ್ಲಿಯೂ ಅವಳ ನೆನಪು ಪ್ರತಿದ್ವನಿಸುತ್ತಿದೆ ಒಂದಲ್ಲಾ ಎಳೇಳು ಸಾರಿ...! ಕ್ಲಾಸ್‍ಲ್ಲಿ ಪ್ಯಾನಿಗಾಗಿ ನಡೆದ ಜಿದ್ದಾಟದಲ್ಲಿ ಗೆದ್ದವಳು ನೀನಲ್ಲವೇ ನನ್ನವಳು. ಅವಳ ಗೆಲ್ಲುವ ಹಠಮಾರಿತನಕ್ಕೆ ಸೋತು ಹೋದ ಹುಚ್ಚು ಪೋರ ನಾನು. ಅವಳ ಒಂದು ನಗುವಿಗಾಗಿ, ವಾರೆಗಣ್ಣಿನ ನೋಟಕ್ಕಾಗಿ, ಕೈಬೆರುಳುಗಳ ಉಂಗುರಗಳ ದರ್ಶನಕ್ಕಾಗಿ, ಇತಿಹಾಸದ ಪೀರಿಯಡ್‍ಲ್ಲಿಯೂ ವಾಕರಿಕೆ ತರುವಷ್ಟು ಭವಿಷತ್‍ಕಾಲದ ಕನಸು ಕಾಣುತ್ತಿದ್ದವನು ನ...