ವಿಷಯಕ್ಕೆ ಹೋಗಿ

ಜನರಲ್ ಬೋಗಿಯಂಬ ವೈವಿಧ್ಯಮಯ ತಾಣ...


‘ಯುವರ್ ಅಟೇಕ್ಷನ್ ಪ್ಲೀಸ್ ಹುಬ್ಬಳ್ಳಿ ಟೂ ಸೋಲಾಪೂರ ಪ್ಯಾಸೆಂಜರ್ ಟ್ರೇನ್ ಅರೈವಲ್” ಗಾನ ಮೊಳಗಿಸುತ್ತಾ ಮೈಕ್ ಎಚ್ಚರಿಸುತ್ತಿದ್ದಂತೆ ತಮ್ಮ ತಮ್ಮ ಬ್ಯಾಗ್‍ಗಳನ್ನು ಎತ್ತಿಕೊಂಡು, ಮಕ್ಕಳ ಕೈ ಹಿಡಿದು, ಜೊತೆ ಬಂದವರಿಗೆ ಗುಡ್ ಬೈ ಹೇಳಿ ಬೋಗಿಯೊಳಗೆ ಕಾಲಿಡುವ ಮಂದಿ ಇರುವೆಗಳು ಸಕ್ಕರೆಗೆ ಮುತ್ತಿಕ್ಕುವಂತೆ ಕಾಣುತ್ತದೆ.
ಕೆಲಸದ ಬೇರೆ ಊರಿಗೆ ತೆರಳುವವರು, ಅಪ್ಪಅಮ್ಮನನ್ನು ಕಾಣಲು ತೆರಳುವವು, ಹೆಂಡತಿಯ ಊರಿಗೆ, ಸ್ನೇಹಿತರ ಮಧುವೆ ಮುಂಜಿಗೆ, ಇಲ್ಲಾ ಸಂಬಂಧಗಳನ್ನು ಕಡಿದುಕೊಂಡು ಪರವೂರಿನಲ್ಲಿ ನೆಲೆ ಕಾಣಲು, ಹಲವಾರು ಕಾರಣಗಳನ್ನು ಇಟ್ಟುಕೊಂಡು ಬಂದ ಪ್ರಯಾಣಿಕರು ಸೀಟು ಹಿಡಿಯುವ ಧಾವಂತದಲ್ಲಿ ಇದ್ದರೆ ಕಂಕಳಲ್ಲಿ ಕುಳಿತ ಮಗು ಬೆರಗುಗಣ್ಣಿನಿಂದ ಕಿಟಕಿಯತ್ತ ಕಣ್ಣು ಹಾಯಿಸುತ್ತದೆ.
ಜಾತೀಗೀತಿಯ ಬಂಧನವನ್ನು ಕಾಣದ ಏಕೈಕ ಸ್ಥಳವೆಂದರೆ ಅದು ರೈಲು ಬೋಗಿ. ಪಕ್ಕದವನ ಜಾತಿಯನ್ನು ಕೇಳದೆ ಮೈ ಅಂಟಿಸಿಕೊಂಡು ನಿಟ್ಟುಸಿರು ಬಿಡುತ್ತಾ ತಮ್ಮದೆ ಯೋಚನಾ ಲಹರಿಯಲ್ಲಿ ಮುಳುಗಿ ಬಟ್ಟೆಗಳನ್ನು ಸರಿಮಾಡಿಕೊಳ್ಳುತ್ತಾರೆ.
ಸುತ್ತಲು ಒಮ್ಮೆ ಕಣ್ಣು ಹಾಯಿಸಿದರೆ ಸೂಟುಬೂಟು ಹಾಕಿಕೊಂಡ ಶ್ರೀಮಂತ, ದೊಗಳೆ ಅಂಗಿ ಧರಿಸಿದ ಮದ್ಯಮ ಕುಟುಂಬ ವ್ಯಕ್ತಿ, ಧೊತರಕ್ಕೆ ನೀಲಿಬಳಿದುಕೊಂಡ ಹಳ್ಳಯ ಹಿರಿಯ, ದಾಡಿ ಬಿಟ್ಟ ಮುಲ್ಲಾ, ಆಗ ತಾನೆ ಮಧುವೆಯಾದ ಜೋಡಿಗಳು, ಹಳ್ಳಿ ಹೆಂಗಸರು, ಚಿಕ್ಕಮಕ್ಕಳು, ಅಷ್ಟೆ ಅಲ್ಲದೆ ಬಿಸ್ಕಿಟ್ ಮಾರುವವವರು, ಬಿಕ್ಷುಕರು, ಚಪ್ಪಾಳೆ ತಟ್ಟುವ ಮಂಗಳಮುಖಿಯರು, ತಂದೆತಾಯಿಗಳಿಂದ ದೂರಾಗಿ ಇತರರೆಡೆಗೆ ಹಣದ ಆಸೆಗಾಗಿ ಕೈ ಚಾಚುವ ಮಕ್ಕಳು ಹಲವು ವೈವಿದ್ಯಮಯವಾದ ಜನಾಂಗದ ಪರಿಚಯವಾಗುತ್ತದೆ. ಅಲ್ಲೆಲ್ಲೂ ಜೋಡಿಹಕ್ಕಿಗಳು ಜೀವನದ ಗೂಡುಕಟ್ಟಲು ಕನಸನ್ನು ಹೆಣೆಯುವಲ್ಲಿ ಬ್ಯುಸಿಯಾಗಿರುತ್ತಾರೆ.
ಸೀಟಿಗಾಗಿ ಮೊದ ಮೊದಲು ಜಗಳವಾಡುತ್ತಿದ್ದವರು ಊರು ಸಮೀಪಿಸುತಿಂದ್ದತೆ ಒಬ್ಬರಿಗೊಬ್ಬರು ಅಂಟಿಕೊಂಡು ಕಷ್ಟಸುಖಗಳನ್ನು ಸಮನಾಗಿ ಶೇರ್ ಮಾಡುತ್ತಿರುತ್ತಾರೆ. ಮಗದೊಬ್ಬ ಟವೆಲ್‍ನ್ನು ಹಾಸಿ ಕಾಲ ಬಳಿ ಯಾವುದೇ ಮುಜುಗರವಿಲ್ಲದೆ ನಿದ್ದೆ ಮಾಡುತ್ತಾ ಪಯಣಿಸುತ್ತಾನೆ. ಮತ್ತೊಬ್ಬರ ಕಾಲು ಇನ್ನೊಬ್ಬರಿಗೆ ತಲೆದಿಂಬಾಗಿ ಮಾರ್ಪಾಡಾಗುತ್ತದೆ. ಯಾರೋ ಮಾಡಿದ ಕಕ್ಕಸ್ಸಿಗೆ ಮಗದೊಬ್ಬರು ನೀರು ಸುರಿಯುತ್ತಾರೆ. ಅದರ ಒಳಗೆ ಟಿಕೆಟ್ ಇಲ್ಲದೇ ಪಯಣ ಮಾಡಿದರೂ ನಡೆಯುತ್ತೆ ಎನ್ನುವ ಧಿಮಾಕಿನ ಪಯಣಿಗರು ಇರುತ್ತಾರೆ.
ಅಲ್ಲಿ ವಡೆ, ಶೇಂಗಾ ವಠಾಟಿ ಬರ್ಜರಿಯಾಗಿ ವ್ಯಾಪಾರ ಕುದುರಿಸುತ್ತವೆ. ಪ್ರತಿಸ್ಟಾಪ್‍ಗೂ ಹೊಸ ಬಗೆಯ ಜನರು ಹತ್ತುತ್ತಾರೆ. ಇಳಿಯುತ್ತಾರೆ. ಕ್ರಾಸಿಂಗ್‍ನ ವೇಳೆಯಲ್ಲಿ ಟೀ ಗುಟುಕರಿಸಿ ಬಾಗಿಲ ಬಳಿ ಜೋತು ಬಿದ್ದು, ಕಿಟಕಿಯೊಳಗೆ ಮೂತಿ ತುರುಕಿಸಿ ಎದರು ಬರುವ ಟ್ರೇನ್‍ಗಾಗಿ ಕಾತರಿಸುತ್ತಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಮಾನವ ಘನತೆಯ ಪ್ರತಿಪಾದಕ: ಬಿಜವಾಡ ವಿಲ್ಸನ್

 ಮಲಹೊರುವ ಪದ್ದತಿ ತನ್ನ ಕುಲ ಕಸುಬು ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಮುಂದಾಗಿದ್ದ ಯುವಕನೋರ್ವ ತನ್ನ ದೃಡ ನಿರ್ಧಾರದಿಂದ ದೇಶಾದ್ಯಂತ ಮಲ ಹೊರುವ ಅಮಾನವೀಯ ಪದ್ಧತಿ ವಿರುದ್ಧ ಜನಾಂದೋಲನ ರೂಪಿಸಿ ಮಾನವ ಘನತೆಯ ಬದುಕು (ಡಿಗ್ನಿಟಿ ಆಪ್ ಲೈಪ್)ನ್ನು ತನ್ನ ಹೋರಾಟದ ಮೂಲಕ ಎತ್ತಿ ಹಿಡಿದ ಉದ್ದೇಶಕ್ಕಾಗಿ 2016ನೇ ಸಾಲಿನ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ ಲಭಿಸಿದೆ. ಅವರ ಹೆಸರು ಕೋಲಾರ ಜಿಲ್ಲೆಯ ಕೆಜಿಎಪ್ ಮೂಲದ ಬಿಜವಾಡ ವಿಲ್ಸನ್. ಆಂದ್ರದ ಓಂಗೋಲ್ ಜಿಲ್ಲೆಯ ಕಂಬಾಲದೇನು ಗ್ರಾಮದ ಬಿಜವಾಡ ಜಾಕೋಬ್ ಎಂಬುವವರು 1935ರ ಸಂದರ್ಭದಲ್ಲಿ ಕೆಜಿಎಪ್‌ಗೆ ಆಗಮಿಸಿ ಇಲ್ಲಿನ ಬಿಜಿಎಂಎಲ್ ಕಾರ್ಖಾನೆಯಲ್ಲಿ ಪೌರಕಾರ್ಮಿಕರಾಗಿ ಕೆಲಸಕ್ಕೆ ಸೇರಿಕೊಳ್ಳುತ್ತಾರೆ. 1966ರಲ್ಲಿ ವಿಲ್ಸನ್ ಜನಿಸಿದರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ನೆರೆಯ ಕುಪ್ಪಂನಲ್ಲಿ ನೆರವೇರಿಸಿದ ವಿಲ್ಸನ್ ಕೆಜಿಎಪ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ತದಂತರ ಹೈದರಾಬಾದ್ ವಿವಿಯಲ್ಲಿ ರಾಜಕೀಯ ಶಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಲಹೊರುವ ಕುಲ ಕಸುಬು ತನ್ನ ಕೊನೆಯ ಮಗನಿಗೆ ತಟ್ಟದಿರಲಿ ಎಂಬ ಕಾರಣಕ್ಕೆ ವಿಲ್ಸನ್ ಅವರನ್ನು ಕುಪ್ಪಂನ ವಿದ್ಯಾರ್ಥಿ ನಿಲಯದಲ್ಲಿ ಸೇರಿಸಿ ಶಿಕ್ಷಣ ಕೊಡಿಸಿದ್ದೇ ಪಾಲಕರ ಮಹತ್ಸಾಧನೆಯಾಗಿತ್ತು. ಮಲ ಹೊರುವ ಸಮುದಾಯದವ ಎಂಬ ಕಾರಣಕ್ಕೆ ಸಹ ಪಾಠಿಗಳಿಂದ ಅವಮಾನಕೊಳಗಾಗಿದ್ದ ವಿಲ್ಸನ್ ಇದಕ್ಕೆ ಕಾರಣ ಹುಡುಕಲು ಹೊರಟಾಗ ಪಾಲಕರು ಸತ್ಯ ಮರೆಮ...

ಸಿದ್ಧರಾಮಯ್ಯ "ಕಿಸ್ ಭಾಗ್ಯ" ತಂದರೆ ಹುಡುಗರು ಏನ್ ಡಾಂಕ್ಯುಮೆಂಟ್ ಕೋಡಬೇಕು...?

ಸಿದ್ಧರಾಮಯ್ಯ "ಕಿಸ್ ಭಾಗ್ಯ" ತಂದರೆ ಹುಡುಗರು ಏನ್ ಡಾಂಕ್ಯುಮೆಂಟ್ ಕೋಡಬೇಕು...?

ಮೊನಚಾದ ಉಗುರು ಬೆನ್ನ ಮೇಲೆ ರಕ್ತ ಉಕ್ಕಿಸಿದೆ

ಒಂದು ಪ್ಲೇಟ್ ತಿಂಡಿ ಬೈಟೂ ಕಾಫೀ ಒಂದು ಒಳ್ಳೆ ಟೈಂಪಾಸ್ ಇಷ್ಟಿದ್ದರೆ ಸಾಕಲ್ಲ ನೀನಿರಲು ಯಾರಿಗೆ ಗೊತ್ತು ನಾನು ಹಸಿದಿದ್ದೆನೆಂದು ಹಸಿಬಿಸಿ ಕನಸೂರಿನಿಂದೆದ್ದು ನೀಟಾಗಿ ಮಡಚಲು ಬೆಡ್‍ಶೀಟ್ ಪಾಪವೆನಿಸುವದು ಅಯ್ಯೋ! ಅಲ್ಲಿ ಮುದುಡಿಕೊಂಡು ಮಲಗಿದ ಕನಸುಗಳಿವೆ ಎಬ್ಬಿಸಲು ನನ್ನಿಂದಾಗುವುದಿಲ್ಲ ಕೂಗಾಡುವ ಅಮ್ಮನಂತೆ ಬಂದೇ ಡಾರ್ಲಿಂಗ್ ಒಂದೇ ನಿಮಿಷ ಬೆರಳ ತುದಿಯಿಂದ ಮೇಘಸಂದೇಶ ಕ್ವಿಕ್ ಎಂದು ಪಟಾಪಟ್ ಒನ್ ಮಿನಿಟ್ ನ್ಯೂಡಲ್ಸ್ ಅಲ್ಲ ಇದು ಹದಮಾಡಿ ಬೇಯಿಸಿದ ಒಗ್ಗರಣೆಗೆ ರುಚಿ ಹಾಕಿದ ಸಾಂಬಾರಿನಂತೆ ಜೀವನ ನಿನಗಷ್ಟು ತಿಳಿಯಲಿಲ್ಲವೇ ಸ್ನಾನ ಮಾಡಿ ರೆಡಿಯಾಗುವುದು ನನಗೆ ಬೋರ್ ಎಂದು! ಐ ಯಾಮ್ ವೇಟಿಂಗ್ ಪಾರ್ ಯು ಒನ್ ಹವರ್ ಹತ್ತಾರು ಸಂದೇಶ ಗೂಡಿನಿಂದ ಹಾರಿದವು ಪಟಪಟನೆ ಪಾರಿವಾಳದಂತೆ ಏನು ಬೇಕು ಸರ್? ಮಾಣಿಗೆ ಉತ್ತರ ಹೇಳಿ ಸಾಕಾಯಿತು ಒಬ್ರು ಬರ್ತಾಯಿದಾರೆ ಪ್ಲೀಜ್ ವ್ಹೇಟ್ ಎಂದು ಟಕ್ ಎಂದು ಗ್ಲಾಸ್ ಕುಕ್ಕಿ ಹೋದ ಅವನಿಗದು ರೂಢಿಯಾಗಿ ಬಿಟ್ಟಿದೆ ಎನಿಸುತ್ತದೆ ಕಪ್ಪು ಕಿವಿಯಲ್ಲಿ ತುರುಕಿರುವ ಹತ್ತಿಯುಂಡೆ ನೋಡಿದರೆ ಅಗೋ ಬಂದೇಬಿಟ್ಟಿ ಬ್ಯೂಟಿಪಾರ್ಲರ್‍ನಿಂದ ಹುಟ್ಟಿದಂತೆ ಅಸಹನೀಯವಾದ ಸಿಟ್ಟು ಮುದುರಿ ಮಲಗಿತು ಮುಗುಳ್ನಗುತ್ತಾ ಐಸ್-ಕ್ರೀಂ ಆರ್ಡರ್ ಮಾಡಿ ಸ್ವಾರಿ ಕಣೋ ಎಂದಾಗ ಅರೇ ಬಿಲ್ಲು ನೀನು ಕೊಟ್ಟೆ! ಕೆಲ್ಸದ ಬಗ್ಗೆ ತಲೆಕೆಡಿಸಿಕೊ ಅಪ್ಪ ಗಂಡು ನೋಡಿದ್ದಾರೆ ನಾಳೆನೆ ಹೋಗಬೇಕು ನಿ...