ವಿಷಯಕ್ಕೆ ಹೋಗಿ

ಜನರಲ್ ಬೋಗಿಯಂಬ ವೈವಿಧ್ಯಮಯ ತಾಣ...


‘ಯುವರ್ ಅಟೇಕ್ಷನ್ ಪ್ಲೀಸ್ ಹುಬ್ಬಳ್ಳಿ ಟೂ ಸೋಲಾಪೂರ ಪ್ಯಾಸೆಂಜರ್ ಟ್ರೇನ್ ಅರೈವಲ್” ಗಾನ ಮೊಳಗಿಸುತ್ತಾ ಮೈಕ್ ಎಚ್ಚರಿಸುತ್ತಿದ್ದಂತೆ ತಮ್ಮ ತಮ್ಮ ಬ್ಯಾಗ್‍ಗಳನ್ನು ಎತ್ತಿಕೊಂಡು, ಮಕ್ಕಳ ಕೈ ಹಿಡಿದು, ಜೊತೆ ಬಂದವರಿಗೆ ಗುಡ್ ಬೈ ಹೇಳಿ ಬೋಗಿಯೊಳಗೆ ಕಾಲಿಡುವ ಮಂದಿ ಇರುವೆಗಳು ಸಕ್ಕರೆಗೆ ಮುತ್ತಿಕ್ಕುವಂತೆ ಕಾಣುತ್ತದೆ.
ಕೆಲಸದ ಬೇರೆ ಊರಿಗೆ ತೆರಳುವವರು, ಅಪ್ಪಅಮ್ಮನನ್ನು ಕಾಣಲು ತೆರಳುವವು, ಹೆಂಡತಿಯ ಊರಿಗೆ, ಸ್ನೇಹಿತರ ಮಧುವೆ ಮುಂಜಿಗೆ, ಇಲ್ಲಾ ಸಂಬಂಧಗಳನ್ನು ಕಡಿದುಕೊಂಡು ಪರವೂರಿನಲ್ಲಿ ನೆಲೆ ಕಾಣಲು, ಹಲವಾರು ಕಾರಣಗಳನ್ನು ಇಟ್ಟುಕೊಂಡು ಬಂದ ಪ್ರಯಾಣಿಕರು ಸೀಟು ಹಿಡಿಯುವ ಧಾವಂತದಲ್ಲಿ ಇದ್ದರೆ ಕಂಕಳಲ್ಲಿ ಕುಳಿತ ಮಗು ಬೆರಗುಗಣ್ಣಿನಿಂದ ಕಿಟಕಿಯತ್ತ ಕಣ್ಣು ಹಾಯಿಸುತ್ತದೆ.
ಜಾತೀಗೀತಿಯ ಬಂಧನವನ್ನು ಕಾಣದ ಏಕೈಕ ಸ್ಥಳವೆಂದರೆ ಅದು ರೈಲು ಬೋಗಿ. ಪಕ್ಕದವನ ಜಾತಿಯನ್ನು ಕೇಳದೆ ಮೈ ಅಂಟಿಸಿಕೊಂಡು ನಿಟ್ಟುಸಿರು ಬಿಡುತ್ತಾ ತಮ್ಮದೆ ಯೋಚನಾ ಲಹರಿಯಲ್ಲಿ ಮುಳುಗಿ ಬಟ್ಟೆಗಳನ್ನು ಸರಿಮಾಡಿಕೊಳ್ಳುತ್ತಾರೆ.
ಸುತ್ತಲು ಒಮ್ಮೆ ಕಣ್ಣು ಹಾಯಿಸಿದರೆ ಸೂಟುಬೂಟು ಹಾಕಿಕೊಂಡ ಶ್ರೀಮಂತ, ದೊಗಳೆ ಅಂಗಿ ಧರಿಸಿದ ಮದ್ಯಮ ಕುಟುಂಬ ವ್ಯಕ್ತಿ, ಧೊತರಕ್ಕೆ ನೀಲಿಬಳಿದುಕೊಂಡ ಹಳ್ಳಯ ಹಿರಿಯ, ದಾಡಿ ಬಿಟ್ಟ ಮುಲ್ಲಾ, ಆಗ ತಾನೆ ಮಧುವೆಯಾದ ಜೋಡಿಗಳು, ಹಳ್ಳಿ ಹೆಂಗಸರು, ಚಿಕ್ಕಮಕ್ಕಳು, ಅಷ್ಟೆ ಅಲ್ಲದೆ ಬಿಸ್ಕಿಟ್ ಮಾರುವವವರು, ಬಿಕ್ಷುಕರು, ಚಪ್ಪಾಳೆ ತಟ್ಟುವ ಮಂಗಳಮುಖಿಯರು, ತಂದೆತಾಯಿಗಳಿಂದ ದೂರಾಗಿ ಇತರರೆಡೆಗೆ ಹಣದ ಆಸೆಗಾಗಿ ಕೈ ಚಾಚುವ ಮಕ್ಕಳು ಹಲವು ವೈವಿದ್ಯಮಯವಾದ ಜನಾಂಗದ ಪರಿಚಯವಾಗುತ್ತದೆ. ಅಲ್ಲೆಲ್ಲೂ ಜೋಡಿಹಕ್ಕಿಗಳು ಜೀವನದ ಗೂಡುಕಟ್ಟಲು ಕನಸನ್ನು ಹೆಣೆಯುವಲ್ಲಿ ಬ್ಯುಸಿಯಾಗಿರುತ್ತಾರೆ.
ಸೀಟಿಗಾಗಿ ಮೊದ ಮೊದಲು ಜಗಳವಾಡುತ್ತಿದ್ದವರು ಊರು ಸಮೀಪಿಸುತಿಂದ್ದತೆ ಒಬ್ಬರಿಗೊಬ್ಬರು ಅಂಟಿಕೊಂಡು ಕಷ್ಟಸುಖಗಳನ್ನು ಸಮನಾಗಿ ಶೇರ್ ಮಾಡುತ್ತಿರುತ್ತಾರೆ. ಮಗದೊಬ್ಬ ಟವೆಲ್‍ನ್ನು ಹಾಸಿ ಕಾಲ ಬಳಿ ಯಾವುದೇ ಮುಜುಗರವಿಲ್ಲದೆ ನಿದ್ದೆ ಮಾಡುತ್ತಾ ಪಯಣಿಸುತ್ತಾನೆ. ಮತ್ತೊಬ್ಬರ ಕಾಲು ಇನ್ನೊಬ್ಬರಿಗೆ ತಲೆದಿಂಬಾಗಿ ಮಾರ್ಪಾಡಾಗುತ್ತದೆ. ಯಾರೋ ಮಾಡಿದ ಕಕ್ಕಸ್ಸಿಗೆ ಮಗದೊಬ್ಬರು ನೀರು ಸುರಿಯುತ್ತಾರೆ. ಅದರ ಒಳಗೆ ಟಿಕೆಟ್ ಇಲ್ಲದೇ ಪಯಣ ಮಾಡಿದರೂ ನಡೆಯುತ್ತೆ ಎನ್ನುವ ಧಿಮಾಕಿನ ಪಯಣಿಗರು ಇರುತ್ತಾರೆ.
ಅಲ್ಲಿ ವಡೆ, ಶೇಂಗಾ ವಠಾಟಿ ಬರ್ಜರಿಯಾಗಿ ವ್ಯಾಪಾರ ಕುದುರಿಸುತ್ತವೆ. ಪ್ರತಿಸ್ಟಾಪ್‍ಗೂ ಹೊಸ ಬಗೆಯ ಜನರು ಹತ್ತುತ್ತಾರೆ. ಇಳಿಯುತ್ತಾರೆ. ಕ್ರಾಸಿಂಗ್‍ನ ವೇಳೆಯಲ್ಲಿ ಟೀ ಗುಟುಕರಿಸಿ ಬಾಗಿಲ ಬಳಿ ಜೋತು ಬಿದ್ದು, ಕಿಟಕಿಯೊಳಗೆ ಮೂತಿ ತುರುಕಿಸಿ ಎದರು ಬರುವ ಟ್ರೇನ್‍ಗಾಗಿ ಕಾತರಿಸುತ್ತಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಮಾನವ ಘನತೆಯ ಪ್ರತಿಪಾದಕ: ಬಿಜವಾಡ ವಿಲ್ಸನ್

 ಮಲಹೊರುವ ಪದ್ದತಿ ತನ್ನ ಕುಲ ಕಸುಬು ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಮುಂದಾಗಿದ್ದ ಯುವಕನೋರ್ವ ತನ್ನ ದೃಡ ನಿರ್ಧಾರದಿಂದ ದೇಶಾದ್ಯಂತ ಮಲ ಹೊರುವ ಅಮಾನವೀಯ ಪದ್ಧತಿ ವಿರುದ್ಧ ಜನಾಂದೋಲನ ರೂಪಿಸಿ ಮಾನವ ಘನತೆಯ ಬದುಕು (ಡಿಗ್ನಿಟಿ ಆಪ್ ಲೈಪ್)ನ್ನು ತನ್ನ ಹೋರಾಟದ ಮೂಲಕ ಎತ್ತಿ ಹಿಡಿದ ಉದ್ದೇಶಕ್ಕಾಗಿ 2016ನೇ ಸಾಲಿನ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ ಲಭಿಸಿದೆ. ಅವರ ಹೆಸರು ಕೋಲಾರ ಜಿಲ್ಲೆಯ ಕೆಜಿಎಪ್ ಮೂಲದ ಬಿಜವಾಡ ವಿಲ್ಸನ್. ಆಂದ್ರದ ಓಂಗೋಲ್ ಜಿಲ್ಲೆಯ ಕಂಬಾಲದೇನು ಗ್ರಾಮದ ಬಿಜವಾಡ ಜಾಕೋಬ್ ಎಂಬುವವರು 1935ರ ಸಂದರ್ಭದಲ್ಲಿ ಕೆಜಿಎಪ್‌ಗೆ ಆಗಮಿಸಿ ಇಲ್ಲಿನ ಬಿಜಿಎಂಎಲ್ ಕಾರ್ಖಾನೆಯಲ್ಲಿ ಪೌರಕಾರ್ಮಿಕರಾಗಿ ಕೆಲಸಕ್ಕೆ ಸೇರಿಕೊಳ್ಳುತ್ತಾರೆ. 1966ರಲ್ಲಿ ವಿಲ್ಸನ್ ಜನಿಸಿದರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ನೆರೆಯ ಕುಪ್ಪಂನಲ್ಲಿ ನೆರವೇರಿಸಿದ ವಿಲ್ಸನ್ ಕೆಜಿಎಪ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ತದಂತರ ಹೈದರಾಬಾದ್ ವಿವಿಯಲ್ಲಿ ರಾಜಕೀಯ ಶಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಲಹೊರುವ ಕುಲ ಕಸುಬು ತನ್ನ ಕೊನೆಯ ಮಗನಿಗೆ ತಟ್ಟದಿರಲಿ ಎಂಬ ಕಾರಣಕ್ಕೆ ವಿಲ್ಸನ್ ಅವರನ್ನು ಕುಪ್ಪಂನ ವಿದ್ಯಾರ್ಥಿ ನಿಲಯದಲ್ಲಿ ಸೇರಿಸಿ ಶಿಕ್ಷಣ ಕೊಡಿಸಿದ್ದೇ ಪಾಲಕರ ಮಹತ್ಸಾಧನೆಯಾಗಿತ್ತು. ಮಲ ಹೊರುವ ಸಮುದಾಯದವ ಎಂಬ ಕಾರಣಕ್ಕೆ ಸಹ ಪಾಠಿಗಳಿಂದ ಅವಮಾನಕೊಳಗಾಗಿದ್ದ ವಿಲ್ಸನ್ ಇದಕ್ಕೆ ಕಾರಣ ಹುಡುಕಲು ಹೊರಟಾಗ ಪಾಲಕರು ಸತ್ಯ ಮರೆಮ...

ಮೊಸರು ಮಾರುವ ಹುಡುಗನ ಸೈಕಲ್ ಮತ್ತು ಪ್ಲಾಶ್‍ಬ್ಯಾಕ್ ನೆನಪು

‘ಕಾಲನ ಕೈಗೆ ದೇವರು ಸೃಷ್ಟಿ ಮಾಡಿದ ಜಗತ್ತು ಉಳಿಯುವದಿಲ್ಲವೆಂದ ಮೇಲೆ ನಾವು ಯಾವ ಲೆಕ್ಕ’ ಏಲ್ಲೋ ಓದಿದ ಅಣಿಮುತ್ತು ಮೊನ್ನೆ ದುತ್ತನೆ ಮೆದುಳಿನಲ್ಲಿ ಗುಂಗಿ ಹುಳದಂತೆ ಕಾಡತೊಡಗಿತು. ಕಾರಣವಿಷ್ಟೇ, ಎಮ್.ಎ ಮುಗಿಯುವ ಸಮಯವೂ ಹೌದು, ಅದಕ್ಕಿಂತ ಮುಖ್ಯವಾಗಿ “ಆನಂದಮಾರ್ಗ ಆಶ್ರಮ” ತೊರೆಯಬೇಕಲ್ಲ ಎನ್ನುವ ನೋವು. ಆ ನೋವಿಗೆ ಕಾರಣವಾದವನು ದಿನಾಲೂ ಗಟ್ಟಿ ಕೆನೆ ‘ಮೊಸರು ಮಾರುವ ಹುಡುಗ’ ಮತ್ತು ಆತನ ‘ಸೈಕಲ್’. ಆ ಹುಡುಗ 7ನೇ ತರಗತಿ. ಯಲ್ಲಪ್ಪ ಮನ್ಸೂರ. ಸುಮಾರು 3 ಕಿ.ಮಿ ಸೈಕಲ್ ತುಳಿದು ಮೊಸರು ಮಾರುವ ಕಾಯಕ ಮಾಡುತ್ತಾನೆ. ಅದಕ್ಕಿಂತ ಹೆಚ್ಚಾಗಿ ಮುಂಜಾನೆಯ ಎಳೆ ಬಿಸಿಲಿನಲ್ಲಿ ಮಲಗಿದ್ದ ಹಾಸಿಗೆ ಹೊದ್ದು ಮಲಗಿದ್ದ ನನಗೆ ಎಚ್ಚರಿಸುವ ಅಲರಾಂ ಬೆಲ್ ಎಂತಲೇ ಹೇಳಬಹುದು. ಅವನ ಸೈಕಲ್ ಮಾಯಲೋಕದ ಕಿನ್ನರರು ತಮ್ಮ ವಾಹನಗಳಿಗೆ ಶೃಂಗಾರ ಮಾಡಿದಂತೆ ಗಾಲಿಗಳಿಗೆ ರಿಬ್ಬನ್ ಸುತ್ತಿ, ಯುದ್ಧಕ್ಕೆ ಸಿದ್ಧನಾಗಿದ್ದೆನೆ ಎನ್ನುವ ರೀತಿ ಭಾವುಟ ತೋರಿಸಿ, ಗೆಂಡೆಗಳನ್ನು ಗಾಳಿಗೆ ಹಾರಾಡಿಸುತ್ತಾ ಗಂಟೆ ಬಾರಿಸುವ ಗತ್ತು ನನ್ನನ್ನು ಬಾಲ್ಯದ ಪ್ಲಾಶ್‍ಬ್ಯಾಕ್‍ಗೆ ಕರೆದೊಯ್ಯುವಂತೆ ಮಾಡಿತ್ತು. ತೂತು ಬಿದ್ದು ಪುಕ್ಸಟ್ಟೆ ಅಂಡು ಕಾಣಿಸುವ ದೊಗಳೆ ಚಡ್ಡಿ ಹಾಕಿಕೊಳ್ಳುತ್ತಿದ್ದ ವಯಸ್ಸಿನ ಹುಡುಗ ನಾನಾಗಿದ್ದೆ. ‘ಮೊದ ಮೊದಲು ಕೊಂಡ ಹೀರೋ ಸೈಕಲ್’ ಎಂಬತೆ ಪುಟ್ಟ ಸೈಕಲ್ ನಮ್ಮ ಮನೆಯ ಅಂಗಳವನ್ನು ಅಲಂಕರಿಸಿತ್ತು. ಇಡೀ ಊರಿಗೆ ಮೊದಲ ಸೈಕಲ್. ಊರಿನ ಜನ ಬಂದು ಅದನ್ನು ಮೈಸೂರ...

ಬಾ ಮಳೆಯೆ ಬಾ....

ಮೂರುಸಂಜೆ ಸಮಯ. ಭೂಮಿಯನ್ನು ಅಪ್ಪಿ ತಬ್ಬಿಕೊಳ್ಳಲು ಮಳೆ ಹನಿಗಳು ಪೈಪೋಟಿಗೆ ಬಿದ್ದಂತೆ ತಾಮುಂದು ನಿಮುಂದು ಎಂದು ಧರಣಿಯ ಕೆನ್ನೆಗೆ ಮುತ್ತಿಕ್ಕುತ್ತವೆ. ಕಾದು ಸುಡುವ ಹಂಚಾಗಿದ್ದ ಭೂಮಿಗೆ ತಣ್ಣನೆಯ ಬಟ್ಟೆಯನ್ನು ಹೊದಿಸಿದ ಅನುಭವ. ಊರ ತುಂಬ ಪಸರಿಸಿದ ಮಣ್ಣ ಸುವಾಸನೆಗೆ ಪಾರಿಜಾತದ ಘಮವು ಸಪ್ಪೆಯಾಗಿದೆ. ಯಾವ ಸೀಮೆಯ, ಯಾವ ಊರಿನ, ಯಾವ ಕೇರಿಯ ನೀರು ಆವಿಯಾಗಿ, ಹೆಪ್ಪುಗಟ್ಟಿ, ಮೋಡವಾಗಿ ಕರಗಿ ನೀರಾಗಿ ಪರಿಚಯವಿಲ್ಲದ ಜಾಗದಲ್ಲಿ ನಾಚಿಕೆ ಪಟ್ಟುಕೊಳ್ಳದೆ ಜಂಬವಿಲ್ಲದೆ ಸುರಿಯುವ ಅಮೃತಘಳಿಗೆಗೆ ಮಣ್ಣಿನೊಳಗೆ ಅಡಗಿ ಕುಳಿತ ಬೀಜ, ಸಸಿ, ಬೇರು ಬಾಯ್ತೆರೆದು ನಿಂತಿರುತ್ತದೆ ತುದಿಗಾಲ ಮೇಲೆ ಬೊಗಸೆಗಣನ್ನನ್ನು ಅರಳಿಸುತ್ತಾ. ಅಲ್ಲೆಲ್ಲೂ ಅಣಬೆಗಳು ಹಿಡಿಮಳೆಗೆ ಭೂಮಿ ನೆನೆಯುವದನ್ನು ತಪ್ಪಿಸಲು ಕ್ಷಣಮಾತ್ರದಲ್ಲಿ ಹೂವಾಗಿ ಅರಳಿ ನಿಲ್ಲುತ್ತವೆ ಹಬ್ಬದ ಛತ್ರಿ ಚಾಮರ ಕಂಡಂತೆ. ಪುಟುಪುಟು ನೆಗೆಯುತ್ತಾ ಓಡಾಡುವ ಕಪ್ಪೆಮರಿಗಳ ಆಟ ಪುಟ್‍ಬಾಲ್ ಆಟ ನೋಡುವಷ್ಟೇ ಮಜಭೂತವಾಗಿರುತ್ತದೆ. ದೇವರ ಆಟ ಬಲ್ಲವರ್ಯಾರು? ಹಸಿದು ಬರಗೆಟ್ಟ ಗಿಡಗಳು ಹಸಿರಾಗಲೂ ಜಡಿಮಳೆ ಬಸಿರಾಗುವಂತೆ ಮಾಡುತ್ತದೆ. ಎಲೆಯುದರಿ ಮುದುಡಿಕೊಂಡ ಗಿಡಗಳು ಮೆಲ್ಲನೆ ಮೈ ಕೊಡವಿಕೊಂಡು ಹಣ್ಣಾದ ಹಳದಿ ಎಲೆಗಳನ್ನು ಉದುರಿಸಿ ಚಿಗುರೆಲೆಗೆ ಜಾಗ ಮಾಡಿಕೊಡುತ್ತದೆ. ಮೆಲ್ಲಗೆ ಹೂವೊಂದು ಗರ್ಭದಿಂದ ಹೊರಬಂದು ನಗುತ್ತಾ ನಾಚಿ ನೀರಾಗುತ್ತದೆ ದುಂಬಿ ಬಂದು ಕುಳಿತಾಗ. ಕೊಟ್ಟಿಗೆಯಲ್ಲಿ ಧೂಳು ಬಡ...