ವಿಷಯಕ್ಕೆ ಹೋಗಿ

ಸಂಬಂಧ ಬೇರೂರುವ ಮುನ್ನ


ಒಂದೇ ಗರ್ಭದಲ್ಲಿ ಮೊಳಕೆಯೊಡೆದವರಲ್ಲ, ಕೂಡಿಬೆಳೆದವರಲ್ಲ, ಒಬ್ಬರಿಗೊಬ್ಬರು ಪರಿಚಯವಿಲ್ಲ. ಆದರೆ ಕಾಣದೆ ಇರುವ ವಿಧಿಯ ಹೆಸರಿನಲ್ಲಿ ಪರಸ್ಪರ ಸಂಧಿಸುವ ಮಾಗಿಯ ಕಾಲ ಬರುತ್ತದೆ. ಅವರ್ಯಾರೋ? ಇವರ್ಯಾರೋ? ಆಸೆಗಳು ವಿಭಿನ್ನ, ಗುರಿಯಂತೂ ಉತ್ತರಾಯಣ ದಕ್ಷಿಣಾಯನ.
ನಸುನಗುವಿನಿಂದ ಕಸಿ ಕಟ್ಟುವ ಸ್ನೇಹ ಹೃದಯದಲ್ಲಿ ಬೇರನ್ನು ಬಿಟ್ಟು ಸಾಯುವವರೆಗೂ ನೆನಪಿನ ಫಲ ನೀಡುತ್ತದೆ. ಸತ್ತರೂ ಅದು ಅಮರವಾಗಿ ನಮ್ಮ ಆತ್ಮೀಯರ ಬಾಯಲ್ಲಿ ಪದವಾಗಿ ಹೊಮ್ಮುತ್ತದೆ. ಒಂದು ಸಣ್ಣ ಖುಷಿಗಾಗಿ ಗುಟುಕಿಸಿದ ಶುಗರ್‍ಲೆಸ್ ಟಿ ನಮ್ಮ ಬಾಳಿನ ತುಂಬಾ ಸಿಹಿಸಕ್ಕರೆಯಂತಾ ಅನುಭವವನ್ನು ತಂದೊಡ್ಡುತ್ತದೆ.
ಗೆಳತನಕ್ಕೆ ಗಂಟು ಬಿದ್ದಾಗ ಹಸಿಮನಸ್ಸು ಅಂಟಿಕೊಂಡು ಮನೆಯವರ ನೆನಪು ಮರೆಯುವಂತೆ ಕುಳಿತ ಕಲ್ಲಿನಬೆಂಚಿಗೂ ಬೇಸರವಾಗುವಂತೆ ಅಲ್ಲಿ ಲೋಕಾಭಿರಾಮದ ಮಾತು ತುಂಬಾ ಅಪಾಯ್ಯಮಾನವಾಗಿರುತ್ತದೆ. ಅಲ್ಲಿ ಆಡಿದ ಮಾತು, ಮಾಡಿದ ಜಗಳ, ಬೇಸರವಾದಾಗ ನೆನಪಿನ ಅಂಗಳಕ್ಕೆ ತಂದಾಗ ತುಟಿಗಳು ತನ್ನಷ್ಟಕ್ಕಕ್ಕೆ ತಾನೇ ನಸುನಗುತ್ತವೆ. ತಪ್ಪಲ್ಲದ ತಪ್ಪಿಗೆ ಕಾಲು ಕೆರೆದುಕೊಂಡು ಮಗುವಿನಂತೆ ರಚ್ಚೆ ಹಿಡಿದು ಹುಸಿಮುನಿಸು ತೋರುವ ಮುಖದಲ್ಲಿ ಯಾವ ಲಜ್ಜೆಯೂ ಇಲ್ಲದೆ ಪುಟ್ಟ ಮಗುವಿನಂತೆ ನಗುವೊಂದು ಪುಟಿಯುತ್ತದೆ ಮೆಲ್ಲಗೆ.
ಹಗಲುರಾತ್ರಿಯೆಲ್ಲಾ ಮೇಸೆಜ್ ಮೂಲಕ ತಮ್ಮ ಮನಸ್ಸಿನ ಭಾವನೆಗಳನ್ನು ಹಂಚಿಕೊಳ್ಳುತ್ತಾ, ಆಪ್ತರಾಗುವ ಕ್ರಿಯೆ ನೋಡನೋಡವಷ್ಟರಲ್ಲಿ ಗಾಡವಾದ ಸಂಬಂಧ ಬೆಳದು ಆಲದಮರದ ಬಿಳಲಿನಂತೆ ವಿಶಾಲವಾಗಿ ಕನಸಿನ ಲೋಕಕ್ಕೆ ತೇಲುತ್ತಾರೆ. ಅಲ್ಲಿ ನೋವಿಗೂ ಒಂದಷ್ಟು ಜಾಗವಿದೆ. ಕಣ್ಣಲ್ಲಿ ಕಂಬನಿ ಹನಿಯೊಡೆಯುವ ಭಾವುಕ ಮಾತು, ಅದಕ್ಕೆ ಉತ್ತರ ಕೊಡದ ನೀರ್ಲಿಪ್ತತೆ, ನಿರ್ಭಾವುಕ ಮನಸ್ಸಿಗೆ ತುಸು ಹುಳಿ ಹಿಂಡಿದಂತಾಗುತ್ತದೆ. ದಿನದ ವೇಳಾಪಟ್ಟಿ ಅದಲು ಬದಲಾಗಿ ಹಸಿವಿನ ಚಿಂತೆ ಇಲ್ಲದೆ ಬರೀ ಮಾತಿನ ಕಂತೆಗೆ ಹಾತೊರೆಯುತ್ತದೆ.
ಇನ್ನೇನೂ ಮತ್ತಷ್ಟು ಆತ್ಮೀಯರಾಗುವ ಹೊತ್ತಿಗೆ ಅದೇ ಕಾಣದ ವಿಧಿಯೊಂದು ಆ ಸಂಬಂಧಗಳಿಗೆ ಭವಿಷ್ಯ ಎಂಬ ಅಡ್ಡಗಾಲು ಹಾಕಿಬಿಡುತ್ತದೆ. ಅಗಲಿಕೆಯಂಬ ಶಬ್ದ ಕೇಳಿ ಮನವು ಮಡುಗಟ್ಟಿ ದುಃಖದಿಂದ ನರ್ತಿಸತೊಡಗುತ್ತದೆ. ಎದೆಯ ತುಂಬಾ ಏಕಾಂಗಿತನದ ಜಿಡ್ಡುಹಿಡಿಯಲು ಆರಂಭವಾಗುತ್ತದೆ. ಆ ಒಂದೆರಡು ದಿನದ ನೋವು ಹೆಪ್ಪುಗಟ್ಟಿ ಮೃದುವಾದ ಹೃದಯದ ತುಂಬೆಲ್ಲಾ ಗೀರಿದಂತಾಗುತ್ತದೆ. ಮೂರನೇ ದಿನ ಆಕಸ್ಮಿಕವಾಗಿಯೋ ಅಥವಾ ಅನಿವಾರ್ಯವೋ ಮೊಬೈಲ್ ನಾಟ್ ರಿಚಬಲ್ ಆಗಿರುತ್ತೆ. ಮತ್ತೆ ಅಲ್ಲಿಗೆ ಅವರ್ಯಾರೋ? ಇವರ್ಯಾರೋ...? ಆದರೆ ನೆನಪುಗಳು ಮಾತ್ರ ಅವರವರದೇ...!

ಲೇಖನ : ಸಂಗಮೇಶ ಡಿಗ್ಗಿ
8553550012

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಮಾನವ ಘನತೆಯ ಪ್ರತಿಪಾದಕ: ಬಿಜವಾಡ ವಿಲ್ಸನ್

 ಮಲಹೊರುವ ಪದ್ದತಿ ತನ್ನ ಕುಲ ಕಸುಬು ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಮುಂದಾಗಿದ್ದ ಯುವಕನೋರ್ವ ತನ್ನ ದೃಡ ನಿರ್ಧಾರದಿಂದ ದೇಶಾದ್ಯಂತ ಮಲ ಹೊರುವ ಅಮಾನವೀಯ ಪದ್ಧತಿ ವಿರುದ್ಧ ಜನಾಂದೋಲನ ರೂಪಿಸಿ ಮಾನವ ಘನತೆಯ ಬದುಕು (ಡಿಗ್ನಿಟಿ ಆಪ್ ಲೈಪ್)ನ್ನು ತನ್ನ ಹೋರಾಟದ ಮೂಲಕ ಎತ್ತಿ ಹಿಡಿದ ಉದ್ದೇಶಕ್ಕಾಗಿ 2016ನೇ ಸಾಲಿನ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ ಲಭಿಸಿದೆ. ಅವರ ಹೆಸರು ಕೋಲಾರ ಜಿಲ್ಲೆಯ ಕೆಜಿಎಪ್ ಮೂಲದ ಬಿಜವಾಡ ವಿಲ್ಸನ್. ಆಂದ್ರದ ಓಂಗೋಲ್ ಜಿಲ್ಲೆಯ ಕಂಬಾಲದೇನು ಗ್ರಾಮದ ಬಿಜವಾಡ ಜಾಕೋಬ್ ಎಂಬುವವರು 1935ರ ಸಂದರ್ಭದಲ್ಲಿ ಕೆಜಿಎಪ್‌ಗೆ ಆಗಮಿಸಿ ಇಲ್ಲಿನ ಬಿಜಿಎಂಎಲ್ ಕಾರ್ಖಾನೆಯಲ್ಲಿ ಪೌರಕಾರ್ಮಿಕರಾಗಿ ಕೆಲಸಕ್ಕೆ ಸೇರಿಕೊಳ್ಳುತ್ತಾರೆ. 1966ರಲ್ಲಿ ವಿಲ್ಸನ್ ಜನಿಸಿದರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ನೆರೆಯ ಕುಪ್ಪಂನಲ್ಲಿ ನೆರವೇರಿಸಿದ ವಿಲ್ಸನ್ ಕೆಜಿಎಪ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ತದಂತರ ಹೈದರಾಬಾದ್ ವಿವಿಯಲ್ಲಿ ರಾಜಕೀಯ ಶಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಲಹೊರುವ ಕುಲ ಕಸುಬು ತನ್ನ ಕೊನೆಯ ಮಗನಿಗೆ ತಟ್ಟದಿರಲಿ ಎಂಬ ಕಾರಣಕ್ಕೆ ವಿಲ್ಸನ್ ಅವರನ್ನು ಕುಪ್ಪಂನ ವಿದ್ಯಾರ್ಥಿ ನಿಲಯದಲ್ಲಿ ಸೇರಿಸಿ ಶಿಕ್ಷಣ ಕೊಡಿಸಿದ್ದೇ ಪಾಲಕರ ಮಹತ್ಸಾಧನೆಯಾಗಿತ್ತು. ಮಲ ಹೊರುವ ಸಮುದಾಯದವ ಎಂಬ ಕಾರಣಕ್ಕೆ ಸಹ ಪಾಠಿಗಳಿಂದ ಅವಮಾನಕೊಳಗಾಗಿದ್ದ ವಿಲ್ಸನ್ ಇದಕ್ಕೆ ಕಾರಣ ಹುಡುಕಲು ಹೊರಟಾಗ ಪಾಲಕರು ಸತ್ಯ ಮರೆಮ...

ಮೊನಚಾದ ಉಗುರು ಬೆನ್ನ ಮೇಲೆ ರಕ್ತ ಉಕ್ಕಿಸಿದೆ

ಒಂದು ಪ್ಲೇಟ್ ತಿಂಡಿ ಬೈಟೂ ಕಾಫೀ ಒಂದು ಒಳ್ಳೆ ಟೈಂಪಾಸ್ ಇಷ್ಟಿದ್ದರೆ ಸಾಕಲ್ಲ ನೀನಿರಲು ಯಾರಿಗೆ ಗೊತ್ತು ನಾನು ಹಸಿದಿದ್ದೆನೆಂದು ಹಸಿಬಿಸಿ ಕನಸೂರಿನಿಂದೆದ್ದು ನೀಟಾಗಿ ಮಡಚಲು ಬೆಡ್‍ಶೀಟ್ ಪಾಪವೆನಿಸುವದು ಅಯ್ಯೋ! ಅಲ್ಲಿ ಮುದುಡಿಕೊಂಡು ಮಲಗಿದ ಕನಸುಗಳಿವೆ ಎಬ್ಬಿಸಲು ನನ್ನಿಂದಾಗುವುದಿಲ್ಲ ಕೂಗಾಡುವ ಅಮ್ಮನಂತೆ ಬಂದೇ ಡಾರ್ಲಿಂಗ್ ಒಂದೇ ನಿಮಿಷ ಬೆರಳ ತುದಿಯಿಂದ ಮೇಘಸಂದೇಶ ಕ್ವಿಕ್ ಎಂದು ಪಟಾಪಟ್ ಒನ್ ಮಿನಿಟ್ ನ್ಯೂಡಲ್ಸ್ ಅಲ್ಲ ಇದು ಹದಮಾಡಿ ಬೇಯಿಸಿದ ಒಗ್ಗರಣೆಗೆ ರುಚಿ ಹಾಕಿದ ಸಾಂಬಾರಿನಂತೆ ಜೀವನ ನಿನಗಷ್ಟು ತಿಳಿಯಲಿಲ್ಲವೇ ಸ್ನಾನ ಮಾಡಿ ರೆಡಿಯಾಗುವುದು ನನಗೆ ಬೋರ್ ಎಂದು! ಐ ಯಾಮ್ ವೇಟಿಂಗ್ ಪಾರ್ ಯು ಒನ್ ಹವರ್ ಹತ್ತಾರು ಸಂದೇಶ ಗೂಡಿನಿಂದ ಹಾರಿದವು ಪಟಪಟನೆ ಪಾರಿವಾಳದಂತೆ ಏನು ಬೇಕು ಸರ್? ಮಾಣಿಗೆ ಉತ್ತರ ಹೇಳಿ ಸಾಕಾಯಿತು ಒಬ್ರು ಬರ್ತಾಯಿದಾರೆ ಪ್ಲೀಜ್ ವ್ಹೇಟ್ ಎಂದು ಟಕ್ ಎಂದು ಗ್ಲಾಸ್ ಕುಕ್ಕಿ ಹೋದ ಅವನಿಗದು ರೂಢಿಯಾಗಿ ಬಿಟ್ಟಿದೆ ಎನಿಸುತ್ತದೆ ಕಪ್ಪು ಕಿವಿಯಲ್ಲಿ ತುರುಕಿರುವ ಹತ್ತಿಯುಂಡೆ ನೋಡಿದರೆ ಅಗೋ ಬಂದೇಬಿಟ್ಟಿ ಬ್ಯೂಟಿಪಾರ್ಲರ್‍ನಿಂದ ಹುಟ್ಟಿದಂತೆ ಅಸಹನೀಯವಾದ ಸಿಟ್ಟು ಮುದುರಿ ಮಲಗಿತು ಮುಗುಳ್ನಗುತ್ತಾ ಐಸ್-ಕ್ರೀಂ ಆರ್ಡರ್ ಮಾಡಿ ಸ್ವಾರಿ ಕಣೋ ಎಂದಾಗ ಅರೇ ಬಿಲ್ಲು ನೀನು ಕೊಟ್ಟೆ! ಕೆಲ್ಸದ ಬಗ್ಗೆ ತಲೆಕೆಡಿಸಿಕೊ ಅಪ್ಪ ಗಂಡು ನೋಡಿದ್ದಾರೆ ನಾಳೆನೆ ಹೋಗಬೇಕು ನಿ...

ಚಂದಿರನಲ್ಲದೇ ನಿನಗೇನು ಕೊಡಲಿ ನಾನು..!

ಅವಳು, ಆಕೆ ಬಳಕಿದರೆ ಬಾತುಕೋಳಿಯ ಮೈಯವಳು, ದುಂಡುಮುಖ, ಗಿಣಿಯನ್ನು ನಾಚಿಸುವ ಮೂಗು, ಗಾಳಿ ಬೆಳಕನ್ನುಂಡು ಉಬ್ಬಿಕೊಂಡ ಗಲ್ಲಗಳು, ಅರಳಿ ನಿಶ್ಚಲವಾಗಿ ಕಾಡಿಸುವ ಮುಗ್ಧ ಕಣ್ಣುಗಳು, ಅಲ್ಲಲಿ ಇಳಿಬಿದ್ದಿರುವ ಮುಂಗುರುಳಿನವಳು, ಹೃದಯಕ್ಕೆ ಬೆಂಕಿ ಹಚ್ಚಿ ಮಾಯವಾಗುವ ಪ್ರೇಮಲೋಕದ ರಾಜಕುಮಾರಿಯಂತವಳು, ಬರಗಾಲ ಬಿದ್ದ ನೆಲಕ್ಕೆ ತಂಪೆರೆಯುವ ಮಳೆ ಸುರಿದವಳು, ಮಿನಾಕ್ಷೀ ಚೌಕ್‍ನ ಪ್ರತಿಯೊಂದು ಕಲ್ಲುಕಲ್ಲಿನಲ್ಲಿಯೂ ಕಾಣಿಸಿದವಳು, ಕಾಡಿಸಿದವಳು, ಹೃದಯಕ್ಕೆ ತೂತು ಕೊರೆದವಳು, ಕ್ಲಾಸ್‍ಲ್ಲಿ ಜುಮುಕಿಗಳನ್ನು ಅಲುಗಾಡಿಸುತ್ತಾ, ಕಾಲ್ಗೆಜ್ಜೆಯ ಸದ್ದುಮಾಡುತ್ತಾ ನಡೆದಾಡುವ ನವಿಲಿನಂತವಳು, ಅದಕ್ಕೂ ಮೀರಿ ಧಿಮಾಕಿನ ರಾಣಿಯ ವಂಶದವಳು. ಅವಳಿಗೆ ನಾನು ಪ್ರೀತಿಯಿಂದ ಆಂಬ್ಯುಲೆನ್ಸ್ ಎಂದು ಕರೆಯುತ್ತಿದ್ದೆ. ಅದಕ್ಕೂ ಒಂದು ಕಾರಣವಿದೆ. ಕೋಚಿಂಗ್‍ಗೆ ಬಿಜಾಪೂರಕ್ಕೆ ಬಂದಾಗ ಗೋಲಬುಂಬಜ್‍ದ ಹಾಗೆ ನನ್ನನ್ನು ಸೆಳೆದವಳು ಅವಳು. ನನ್ನ ಹೃದಯದ ಪ್ರತಿ ಕೋಣೆಯಲ್ಲಿಯೂ ಅವಳ ನೆನಪು ಪ್ರತಿದ್ವನಿಸುತ್ತಿದೆ ಒಂದಲ್ಲಾ ಎಳೇಳು ಸಾರಿ...! ಕ್ಲಾಸ್‍ಲ್ಲಿ ಪ್ಯಾನಿಗಾಗಿ ನಡೆದ ಜಿದ್ದಾಟದಲ್ಲಿ ಗೆದ್ದವಳು ನೀನಲ್ಲವೇ ನನ್ನವಳು. ಅವಳ ಗೆಲ್ಲುವ ಹಠಮಾರಿತನಕ್ಕೆ ಸೋತು ಹೋದ ಹುಚ್ಚು ಪೋರ ನಾನು. ಅವಳ ಒಂದು ನಗುವಿಗಾಗಿ, ವಾರೆಗಣ್ಣಿನ ನೋಟಕ್ಕಾಗಿ, ಕೈಬೆರುಳುಗಳ ಉಂಗುರಗಳ ದರ್ಶನಕ್ಕಾಗಿ, ಇತಿಹಾಸದ ಪೀರಿಯಡ್‍ಲ್ಲಿಯೂ ವಾಕರಿಕೆ ತರುವಷ್ಟು ಭವಿಷತ್‍ಕಾಲದ ಕನಸು ಕಾಣುತ್ತಿದ್ದವನು ನ...