ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಮಾನವ ಘನತೆಯ ಪ್ರತಿಪಾದಕ: ಬಿಜವಾಡ ವಿಲ್ಸನ್

 ಮಲಹೊರುವ ಪದ್ದತಿ ತನ್ನ ಕುಲ ಕಸುಬು ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಮುಂದಾಗಿದ್ದ ಯುವಕನೋರ್ವ ತನ್ನ ದೃಡ ನಿರ್ಧಾರದಿಂದ ದೇಶಾದ್ಯಂತ ಮಲ ಹೊರುವ ಅಮಾನವೀಯ ಪದ್ಧತಿ ವಿರುದ್ಧ ಜನಾಂದೋಲನ ರೂಪಿಸಿ ಮಾನವ ಘನತೆಯ ಬದುಕು (ಡಿಗ್ನಿಟಿ ಆಪ್ ಲೈಪ್)ನ್ನು ತನ್ನ ಹೋರಾಟದ ಮೂಲಕ ಎತ್ತಿ ಹಿಡಿದ ಉದ್ದೇಶಕ್ಕಾಗಿ 2016ನೇ ಸಾಲಿನ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ ಲಭಿಸಿದೆ. ಅವರ ಹೆಸರು ಕೋಲಾರ ಜಿಲ್ಲೆಯ ಕೆಜಿಎಪ್ ಮೂಲದ ಬಿಜವಾಡ ವಿಲ್ಸನ್. ಆಂದ್ರದ ಓಂಗೋಲ್ ಜಿಲ್ಲೆಯ ಕಂಬಾಲದೇನು ಗ್ರಾಮದ ಬಿಜವಾಡ ಜಾಕೋಬ್ ಎಂಬುವವರು 1935ರ ಸಂದರ್ಭದಲ್ಲಿ ಕೆಜಿಎಪ್‌ಗೆ ಆಗಮಿಸಿ ಇಲ್ಲಿನ ಬಿಜಿಎಂಎಲ್ ಕಾರ್ಖಾನೆಯಲ್ಲಿ ಪೌರಕಾರ್ಮಿಕರಾಗಿ ಕೆಲಸಕ್ಕೆ ಸೇರಿಕೊಳ್ಳುತ್ತಾರೆ. 1966ರಲ್ಲಿ ವಿಲ್ಸನ್ ಜನಿಸಿದರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ನೆರೆಯ ಕುಪ್ಪಂನಲ್ಲಿ ನೆರವೇರಿಸಿದ ವಿಲ್ಸನ್ ಕೆಜಿಎಪ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ತದಂತರ ಹೈದರಾಬಾದ್ ವಿವಿಯಲ್ಲಿ ರಾಜಕೀಯ ಶಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಲಹೊರುವ ಕುಲ ಕಸುಬು ತನ್ನ ಕೊನೆಯ ಮಗನಿಗೆ ತಟ್ಟದಿರಲಿ ಎಂಬ ಕಾರಣಕ್ಕೆ ವಿಲ್ಸನ್ ಅವರನ್ನು ಕುಪ್ಪಂನ ವಿದ್ಯಾರ್ಥಿ ನಿಲಯದಲ್ಲಿ ಸೇರಿಸಿ ಶಿಕ್ಷಣ ಕೊಡಿಸಿದ್ದೇ ಪಾಲಕರ ಮಹತ್ಸಾಧನೆಯಾಗಿತ್ತು. ಮಲ ಹೊರುವ ಸಮುದಾಯದವ ಎಂಬ ಕಾರಣಕ್ಕೆ ಸಹ ಪಾಠಿಗಳಿಂದ ಅವಮಾನಕೊಳಗಾಗಿದ್ದ ವಿಲ್ಸನ್ ಇದಕ್ಕೆ ಕಾರಣ ಹುಡುಕಲು ಹೊರಟಾಗ ಪಾಲಕರು ಸತ್ಯ ಮರೆಮ...

ನಿನ್ನದು ಕಠೋರ ಮೌನ

ಅಧರಗಳಿಗೆ ಹೆಣೆದ ಕಸೂತಿ ಬಿಚ್ಚು ಹೆಪ್ಪುಗಟ್ಟಿದೆ ನಿನ್ನದು ಕಠೋರ ಮೌನ ನಿನ್ನ ಧನಿಗಾಗಿ ನಿಶಬ್ಧರಾಗಿ ಮಲಗಿದ್ದಾರೆ ಸ್ಮಶಾನದಲಿ ನಿನ್ನದು ಕಠೋರ ಮೌನ ಹಾಡು ಕುಣಿತ ಮೋಜಿನ ಮಧುಶಾಲೆಯ ಮಂಚದಲಿ ರತಿಸುಖದ ಉನ್ಮಾದಕತೆ ಕೊಳಕು ಶರಾಬಿನ ಬಟ್ಟಲಲಿ ಕೆನೆಗಟ್ಟಿದೆ ಎಳಸು ಹೃದಯದಲಿ ಬಂಧಿಯಾಗಿದೆ ಮರಿಮೀನು ಹೊರಬರಲಾಗದೆ ನಿನ್ನೆದೆಯ ಸದ್ದಿಗೆ ಕಿವಿ ನಿಮಿರಿಸಿ ಬರಗೆಟ್ಟಿದೆ ನಿನ್ನದು ಕಠೋರ ಮೌನ ಜಾತ್ರೆಯಲಿ ತೂರಿಬರುವ ಬೆಂಡು ಬತಾಸಿಗಿಂತಲೂ ಹರಿತ ಕಹಳೆ ಜಾಂಗಟೆ ಕಣ್ಣೀರು ಸುರಿಸಿ ಪಾಚಿಗಟ್ಟಿದೆ ನಿನ್ನದು ಕಠೋರ ಮೌನ ಮಾದಕ ನೀಳಕೂದಲಗಳ ಪಿಸುಗುಟ್ಟುವ ಮಾತಿಗೆ ಹಾಡಹಗಲೆ ಎದೆಸೆಟೆಸಿ ಬಳ್ಳಿಯಲ್ಲಿ ಪಾರಿಜಾತ ಹೂಗಟ್ಟಿದೆ ನಿನ್ನದು ಕಠೋರ ಮೌನ ಹುಚ್ಚಲೌಡಿ ‘ಮಿತ್ರಾ’ ಅವಳನ್ನೆಕೆ ನಿಂದಿಸುವೆ ಸುಖಾಸುಮ್ಮನೆ ಕಣ್ಣುತೆರೆದು ನೋಡು ನಿನ್ನ ಮನಸು ನೀತಿಗೆಟ್ಟಿದೆ ನಿನ್ನದು ಕಠೋರ ಮೌನ -    ಸಂಗಮೇಶ ಡಿಗ್ಗಿ 8553550012

ಸಿದ್ಧರಾಮಯ್ಯ "ಕಿಸ್ ಭಾಗ್ಯ" ತಂದರೆ ಹುಡುಗರು ಏನ್ ಡಾಂಕ್ಯುಮೆಂಟ್ ಕೋಡಬೇಕು...?

ಸಿದ್ಧರಾಮಯ್ಯ "ಕಿಸ್ ಭಾಗ್ಯ" ತಂದರೆ ಹುಡುಗರು ಏನ್ ಡಾಂಕ್ಯುಮೆಂಟ್ ಕೋಡಬೇಕು...?

ಮೊಸರು ಮಾರುವ ಹುಡುಗನ ಸೈಕಲ್ ಮತ್ತು ಪ್ಲಾಶ್‍ಬ್ಯಾಕ್ ನೆನಪು

‘ಕಾಲನ ಕೈಗೆ ದೇವರು ಸೃಷ್ಟಿ ಮಾಡಿದ ಜಗತ್ತು ಉಳಿಯುವದಿಲ್ಲವೆಂದ ಮೇಲೆ ನಾವು ಯಾವ ಲೆಕ್ಕ’ ಏಲ್ಲೋ ಓದಿದ ಅಣಿಮುತ್ತು ಮೊನ್ನೆ ದುತ್ತನೆ ಮೆದುಳಿನಲ್ಲಿ ಗುಂಗಿ ಹುಳದಂತೆ ಕಾಡತೊಡಗಿತು. ಕಾರಣವಿಷ್ಟೇ, ಎಮ್.ಎ ಮುಗಿಯುವ ಸಮಯವೂ ಹೌದು, ಅದಕ್ಕಿಂತ ಮುಖ್ಯವಾಗಿ “ಆನಂದಮಾರ್ಗ ಆಶ್ರಮ” ತೊರೆಯಬೇಕಲ್ಲ ಎನ್ನುವ ನೋವು. ಆ ನೋವಿಗೆ ಕಾರಣವಾದವನು ದಿನಾಲೂ ಗಟ್ಟಿ ಕೆನೆ ‘ಮೊಸರು ಮಾರುವ ಹುಡುಗ’ ಮತ್ತು ಆತನ ‘ಸೈಕಲ್’. ಆ ಹುಡುಗ 7ನೇ ತರಗತಿ. ಯಲ್ಲಪ್ಪ ಮನ್ಸೂರ. ಸುಮಾರು 3 ಕಿ.ಮಿ ಸೈಕಲ್ ತುಳಿದು ಮೊಸರು ಮಾರುವ ಕಾಯಕ ಮಾಡುತ್ತಾನೆ. ಅದಕ್ಕಿಂತ ಹೆಚ್ಚಾಗಿ ಮುಂಜಾನೆಯ ಎಳೆ ಬಿಸಿಲಿನಲ್ಲಿ ಮಲಗಿದ್ದ ಹಾಸಿಗೆ ಹೊದ್ದು ಮಲಗಿದ್ದ ನನಗೆ ಎಚ್ಚರಿಸುವ ಅಲರಾಂ ಬೆಲ್ ಎಂತಲೇ ಹೇಳಬಹುದು. ಅವನ ಸೈಕಲ್ ಮಾಯಲೋಕದ ಕಿನ್ನರರು ತಮ್ಮ ವಾಹನಗಳಿಗೆ ಶೃಂಗಾರ ಮಾಡಿದಂತೆ ಗಾಲಿಗಳಿಗೆ ರಿಬ್ಬನ್ ಸುತ್ತಿ, ಯುದ್ಧಕ್ಕೆ ಸಿದ್ಧನಾಗಿದ್ದೆನೆ ಎನ್ನುವ ರೀತಿ ಭಾವುಟ ತೋರಿಸಿ, ಗೆಂಡೆಗಳನ್ನು ಗಾಳಿಗೆ ಹಾರಾಡಿಸುತ್ತಾ ಗಂಟೆ ಬಾರಿಸುವ ಗತ್ತು ನನ್ನನ್ನು ಬಾಲ್ಯದ ಪ್ಲಾಶ್‍ಬ್ಯಾಕ್‍ಗೆ ಕರೆದೊಯ್ಯುವಂತೆ ಮಾಡಿತ್ತು. ತೂತು ಬಿದ್ದು ಪುಕ್ಸಟ್ಟೆ ಅಂಡು ಕಾಣಿಸುವ ದೊಗಳೆ ಚಡ್ಡಿ ಹಾಕಿಕೊಳ್ಳುತ್ತಿದ್ದ ವಯಸ್ಸಿನ ಹುಡುಗ ನಾನಾಗಿದ್ದೆ. ‘ಮೊದ ಮೊದಲು ಕೊಂಡ ಹೀರೋ ಸೈಕಲ್’ ಎಂಬತೆ ಪುಟ್ಟ ಸೈಕಲ್ ನಮ್ಮ ಮನೆಯ ಅಂಗಳವನ್ನು ಅಲಂಕರಿಸಿತ್ತು. ಇಡೀ ಊರಿಗೆ ಮೊದಲ ಸೈಕಲ್. ಊರಿನ ಜನ ಬಂದು ಅದನ್ನು ಮೈಸೂರ...

ಬಾ ಮಳೆಯೆ ಬಾ....

ಮೂರುಸಂಜೆ ಸಮಯ. ಭೂಮಿಯನ್ನು ಅಪ್ಪಿ ತಬ್ಬಿಕೊಳ್ಳಲು ಮಳೆ ಹನಿಗಳು ಪೈಪೋಟಿಗೆ ಬಿದ್ದಂತೆ ತಾಮುಂದು ನಿಮುಂದು ಎಂದು ಧರಣಿಯ ಕೆನ್ನೆಗೆ ಮುತ್ತಿಕ್ಕುತ್ತವೆ. ಕಾದು ಸುಡುವ ಹಂಚಾಗಿದ್ದ ಭೂಮಿಗೆ ತಣ್ಣನೆಯ ಬಟ್ಟೆಯನ್ನು ಹೊದಿಸಿದ ಅನುಭವ. ಊರ ತುಂಬ ಪಸರಿಸಿದ ಮಣ್ಣ ಸುವಾಸನೆಗೆ ಪಾರಿಜಾತದ ಘಮವು ಸಪ್ಪೆಯಾಗಿದೆ. ಯಾವ ಸೀಮೆಯ, ಯಾವ ಊರಿನ, ಯಾವ ಕೇರಿಯ ನೀರು ಆವಿಯಾಗಿ, ಹೆಪ್ಪುಗಟ್ಟಿ, ಮೋಡವಾಗಿ ಕರಗಿ ನೀರಾಗಿ ಪರಿಚಯವಿಲ್ಲದ ಜಾಗದಲ್ಲಿ ನಾಚಿಕೆ ಪಟ್ಟುಕೊಳ್ಳದೆ ಜಂಬವಿಲ್ಲದೆ ಸುರಿಯುವ ಅಮೃತಘಳಿಗೆಗೆ ಮಣ್ಣಿನೊಳಗೆ ಅಡಗಿ ಕುಳಿತ ಬೀಜ, ಸಸಿ, ಬೇರು ಬಾಯ್ತೆರೆದು ನಿಂತಿರುತ್ತದೆ ತುದಿಗಾಲ ಮೇಲೆ ಬೊಗಸೆಗಣನ್ನನ್ನು ಅರಳಿಸುತ್ತಾ. ಅಲ್ಲೆಲ್ಲೂ ಅಣಬೆಗಳು ಹಿಡಿಮಳೆಗೆ ಭೂಮಿ ನೆನೆಯುವದನ್ನು ತಪ್ಪಿಸಲು ಕ್ಷಣಮಾತ್ರದಲ್ಲಿ ಹೂವಾಗಿ ಅರಳಿ ನಿಲ್ಲುತ್ತವೆ ಹಬ್ಬದ ಛತ್ರಿ ಚಾಮರ ಕಂಡಂತೆ. ಪುಟುಪುಟು ನೆಗೆಯುತ್ತಾ ಓಡಾಡುವ ಕಪ್ಪೆಮರಿಗಳ ಆಟ ಪುಟ್‍ಬಾಲ್ ಆಟ ನೋಡುವಷ್ಟೇ ಮಜಭೂತವಾಗಿರುತ್ತದೆ. ದೇವರ ಆಟ ಬಲ್ಲವರ್ಯಾರು? ಹಸಿದು ಬರಗೆಟ್ಟ ಗಿಡಗಳು ಹಸಿರಾಗಲೂ ಜಡಿಮಳೆ ಬಸಿರಾಗುವಂತೆ ಮಾಡುತ್ತದೆ. ಎಲೆಯುದರಿ ಮುದುಡಿಕೊಂಡ ಗಿಡಗಳು ಮೆಲ್ಲನೆ ಮೈ ಕೊಡವಿಕೊಂಡು ಹಣ್ಣಾದ ಹಳದಿ ಎಲೆಗಳನ್ನು ಉದುರಿಸಿ ಚಿಗುರೆಲೆಗೆ ಜಾಗ ಮಾಡಿಕೊಡುತ್ತದೆ. ಮೆಲ್ಲಗೆ ಹೂವೊಂದು ಗರ್ಭದಿಂದ ಹೊರಬಂದು ನಗುತ್ತಾ ನಾಚಿ ನೀರಾಗುತ್ತದೆ ದುಂಬಿ ಬಂದು ಕುಳಿತಾಗ. ಕೊಟ್ಟಿಗೆಯಲ್ಲಿ ಧೂಳು ಬಡ...

ಚಂದಿರನಲ್ಲದೇ ನಿನಗೇನು ಕೊಡಲಿ ನಾನು..!

ಅವಳು, ಆಕೆ ಬಳಕಿದರೆ ಬಾತುಕೋಳಿಯ ಮೈಯವಳು, ದುಂಡುಮುಖ, ಗಿಣಿಯನ್ನು ನಾಚಿಸುವ ಮೂಗು, ಗಾಳಿ ಬೆಳಕನ್ನುಂಡು ಉಬ್ಬಿಕೊಂಡ ಗಲ್ಲಗಳು, ಅರಳಿ ನಿಶ್ಚಲವಾಗಿ ಕಾಡಿಸುವ ಮುಗ್ಧ ಕಣ್ಣುಗಳು, ಅಲ್ಲಲಿ ಇಳಿಬಿದ್ದಿರುವ ಮುಂಗುರುಳಿನವಳು, ಹೃದಯಕ್ಕೆ ಬೆಂಕಿ ಹಚ್ಚಿ ಮಾಯವಾಗುವ ಪ್ರೇಮಲೋಕದ ರಾಜಕುಮಾರಿಯಂತವಳು, ಬರಗಾಲ ಬಿದ್ದ ನೆಲಕ್ಕೆ ತಂಪೆರೆಯುವ ಮಳೆ ಸುರಿದವಳು, ಮಿನಾಕ್ಷೀ ಚೌಕ್‍ನ ಪ್ರತಿಯೊಂದು ಕಲ್ಲುಕಲ್ಲಿನಲ್ಲಿಯೂ ಕಾಣಿಸಿದವಳು, ಕಾಡಿಸಿದವಳು, ಹೃದಯಕ್ಕೆ ತೂತು ಕೊರೆದವಳು, ಕ್ಲಾಸ್‍ಲ್ಲಿ ಜುಮುಕಿಗಳನ್ನು ಅಲುಗಾಡಿಸುತ್ತಾ, ಕಾಲ್ಗೆಜ್ಜೆಯ ಸದ್ದುಮಾಡುತ್ತಾ ನಡೆದಾಡುವ ನವಿಲಿನಂತವಳು, ಅದಕ್ಕೂ ಮೀರಿ ಧಿಮಾಕಿನ ರಾಣಿಯ ವಂಶದವಳು. ಅವಳಿಗೆ ನಾನು ಪ್ರೀತಿಯಿಂದ ಆಂಬ್ಯುಲೆನ್ಸ್ ಎಂದು ಕರೆಯುತ್ತಿದ್ದೆ. ಅದಕ್ಕೂ ಒಂದು ಕಾರಣವಿದೆ. ಕೋಚಿಂಗ್‍ಗೆ ಬಿಜಾಪೂರಕ್ಕೆ ಬಂದಾಗ ಗೋಲಬುಂಬಜ್‍ದ ಹಾಗೆ ನನ್ನನ್ನು ಸೆಳೆದವಳು ಅವಳು. ನನ್ನ ಹೃದಯದ ಪ್ರತಿ ಕೋಣೆಯಲ್ಲಿಯೂ ಅವಳ ನೆನಪು ಪ್ರತಿದ್ವನಿಸುತ್ತಿದೆ ಒಂದಲ್ಲಾ ಎಳೇಳು ಸಾರಿ...! ಕ್ಲಾಸ್‍ಲ್ಲಿ ಪ್ಯಾನಿಗಾಗಿ ನಡೆದ ಜಿದ್ದಾಟದಲ್ಲಿ ಗೆದ್ದವಳು ನೀನಲ್ಲವೇ ನನ್ನವಳು. ಅವಳ ಗೆಲ್ಲುವ ಹಠಮಾರಿತನಕ್ಕೆ ಸೋತು ಹೋದ ಹುಚ್ಚು ಪೋರ ನಾನು. ಅವಳ ಒಂದು ನಗುವಿಗಾಗಿ, ವಾರೆಗಣ್ಣಿನ ನೋಟಕ್ಕಾಗಿ, ಕೈಬೆರುಳುಗಳ ಉಂಗುರಗಳ ದರ್ಶನಕ್ಕಾಗಿ, ಇತಿಹಾಸದ ಪೀರಿಯಡ್‍ಲ್ಲಿಯೂ ವಾಕರಿಕೆ ತರುವಷ್ಟು ಭವಿಷತ್‍ಕಾಲದ ಕನಸು ಕಾಣುತ್ತಿದ್ದವನು ನ...

ವಂಕ ಮೂತಿ ಹನುಮಪ್ಪನ ಸಂಕಟ

‘ದೇವ್ರೇ ನನ್ ಹುಡುಗಿ ಬಂದಾಳ, ಅವ್ಳು ನೋಡಾಕ ಸನ್ನಿಲಿಯೋಲ್ ತರಾ ಅಲ್ಲದಿದ್ರೂ ಒಂದ್ ರೆಂಜಿಗೆ ರಮ್ಯಾ, ಮಲ್ಲಿಕಾ ಶರಾವತ್ ಇದ್ದಾಂಗ ಅದಾಳಾ... ಅಕಿಗೆ ನಂಗ ಸೆಟ್ ಮಾಡಿದ್ರ ನಿಂಗ ಒಂದು ಕಾಯಿ ಒಡೀತೀನಿ’ ಅಂತ ಹುಡುಗನೊಬ್ಬ ಶನಿವಾರದ ಸಾಯಂಕಾಲದ ಸಮಯದಲ್ಲಿ ಒಂದೇ ಉಸುರಿಗೆ ಬೇಡಿಕೊಂಡ. ಆ ದೇವರು ಬ್ಯಾರೆ ಯಾರು ಅಲ್ಲ. ವಾಮನಪುತ್ರ, ರಾಮನಭಕ್ತ, ಗುಡ್ಡವನೇತ್ತಿದ ಆಂಜನೇಯ, ಬ್ರಹ್ಮಾಂಡದಲ್ಲಿ ಮೊದಲಬಾರಿಗೆ ಸಿಕ್ಸ್‍ಪ್ಯಾಕ ಮಾಡಿಕೊಂಡ ಹನುಮಂತ, ನನ್ ಪಾಲಿಗೆ ವಂಕ ಮೂತಿ ಹನುಮ್ಯಾ..! ವಂಕ ಮೂತಿ ಹನುಮ್ಯಾ ಮೊದಲಾ ಬ್ರಹ್ಮಚಾರಿ. ಅವನಿಗೆ ಹುಡುಗಿ ಸಿಗಲಾರದೆ ಮೂತಿ ಸಿಂಡರಿಸಿಕೊಂಡು ನಿಂತಲ್ಲೇ ನಿಂತು ಕಾಲು ನೊಯಿದರೂ ಪರವಾಗಿಲ್ಲ ಜಗವ ರಕ್ಷಿಸೋ ಪಣ ತೊಟ್ಟಿದ್ದಾನೆ. ಅಂತವನ ಎದುರು ಈ ಹುಡುಗಾ ಹುಡುಗಿ ಕೊಡು ಎಂದು ಎಟಿಎಮ್ ಮುಂದೆ ಡ್ರಾ ಮಾಡಿಕೋಳ್ಳುವ ರೀತಿ ಬೇಡ್ತಾ ಇದ್ದರೆ ಆ ದ್ಯಾವ್ರಿಗೆ ಹೊಟ್ಟ್ಯಾಗ ಖಾರ ಕಲಸಿದಂಗ ಆಗಲಾರದೆ ಇರಲಾರದು. ಅದರಾಗ ಬ್ಯಾರೆ ಈ ಹುಡುಗ್ಯಾರು ನೀಲಿ,ಹಳದಿ,ಕೆಂಪು ಜಗಮಗಿಸೋ ಬಟ್ಟಿ ಹಾಕ್ಕೊಂಡು, ಇಡೀ ಊರಿಗೆ ಪುಗಸೆಟ್ಟೆ ಸೆಂಟ್ ವಾಸನೆ ಬಡಿಸುತ್ತಾ, ಮಲ್ಲಿಗೆ, ರೋಜ್, ಸೇವಂತಿ ಇತ್ಯಾದಿ ಮುಡಿದುಕೊಂಡು ಹನುಮಪ್ಪನ ಗುಡಿಗೆ ಬಂದ್ರ ಆ ದೇವರಿಗೆ ಟೆಂಪರೇಚರ್ ಬಂದು ಜ್ವರಾಗೀರಾ ಬರಾಂಗಿಲೇನು ಅನ್ನುವದು ನನ್ನ ಬಹುದೊಡ್ಡ ಬಿಡಿಸಲಾರದ ಗಣಿತ ಯಕ್ಷಪ್ರಶ್ನೆಯಾಗಿದೆ. ಅವನಿಗೂ ಆಸೆ ಇರುತಲ್ವಾ..? ನನಗೂ ಸಂಸಾರ ಮಾಡೋಕೇ ಅಲ್ಲದಿದ್ದರೂ,...